10:47 PM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಸಾಸಲವಾಡ: ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಇಷ್ಟಲಿಂಗ ಪೂಜೆ

10/03/2024, 19:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಸಾಸಲವಾಡ ಗ್ರಾಮದಲ್ಲಿ ಮಾ8ರ ಶಿವರಾತ್ರಿ ಹಬ್ಬದಂದು, ಜಂಗಮ ಸಮುದಾಯದ ಬಿಜೆಪಿ ಮುಖಂಡರಾದ ಎಂ.ಎಂ. ಚಂದ್ರಶೇಖರಯ್ಯ ಅವರ ಸ್ವಗೃಹದಲ್ಲಿ ಮನೆಯ ಸದಸ್ಯರೆಲ್ಲರೊಡಗೂಡಿ, ಶಿವರಾತ್ರಿ ಹಬ್ಬದ ಪ್ರಯುಕ್ತ ಇಷ್ಟ ಲಿಂಗಪೂಜೆ ನೆರವೇರಿಸುವ ಮೂಲಕ ಹಾಲಿ ಪ್ರಧಾನ ಮಂತ್ರಿಗಳಾಗಿರುವ ನರೇಂದ್ರ ಮೋದಿಯವರು, ಮತ್ತೊಮ್ಮೆ ಪ್ರಧಾನ ಮಂತ್ರಿಗಳಾಗಲೆಂದು ಶಿವನಲ್ಲಿ ಪ್ರಾರ್ಥಿಸಿದ್ದಾರೆ.

ಸಾಸಲವಾಡ ವಾಸಿ ಜಂಗಮ ಸಮುದಾಯದ ಯುವ ಮುಖಂಡರು ಹಾಗೂ ಬಿಜೆಪಿಯ ಮುಖಂಡರಾದ ಚಂದ್ರಶೇಖ ಅವರು ದಶಕಗಳಿಂದಲೂ ಬಿಜೆಪಿ ಪಕ್ಷದ ಮುಖಂಡತ್ವ ನಿರ್ವಹಿಸುತ್ತಿದ್ದು, ಅವರು ಪಕ್ಕಾ ಮೋದಿಯವರ ಅಭಿಮಾನಿಗಳಾಗಿದ್ದಾರೆ. “ನಮ್ಮ ಕುಟುಂಬ ಮೋದಿ ಕುಟುಂಬ” ಗ್ರೂಪ್ ನಲ್ಲಿ ಪ್ರಾರಂಭದಿಂದಲೂ ತುಂಬಾ ಚಟುವಟಿಯಿಳ್ಳವರಾಗಿದ್ದಾರೆ, ಅವರು ತಮ್ಮ ಸ್ವಗೃಹದಲ್ಲಿ ತಮ್ಮ ಮನೆಯ ಸರ್ವ ಸದಸ್ಯರೊಡಗೂಡಿ. ಶಿವರಾತ್ರಿ ಹಬ್ಬದ ಪ್ರಯುಕ್ತ ಧಾರ್ಮಿಕ ವಿದಿವಿಧಾನದಂತೆ ಶಿವ ಪೂಜೆ ನೆರವೇರಿಸಿದ್ದಾರೆ ಮತ್ತು ಮುಂಬರುವ ಚುನಾವಣೆಯಲ್ಲಿ. ಬಿಜೆಪಿ ಅತ್ಯಧಿಕ ಸಂಖ್ಯೆಗಳ ಸ್ಥಾನಗಳಲ್ಲಿ ಜಯಗಳಿಸಿ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು, ಹಾಗೂ ಹಾಲಿ ಪ್ರಧ‍ಾನಿ ನರೇಂದ್ರ ಮೋದಿಯರು. ಮತ್ತೆ ಪ್ರಧಾನ ಮಂತ್ರಿಗಳಾಗಿ ಆಯ್ಕೆಯಾಗಬೇಕೆಂಬ, ತಮ್ಮ ಮಹಾದಾಸೆಗಳನ್ನು ಈಡೇರಿಸುವಂತೆ ಸಂಕಲ್ಪ ಮಾಡಿ ಇಷ್ಟಲಿಂಗ ಪೂಜೆ ನೆರವೇರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು