12:13 AM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಸಾಸಲವಾಡ: ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಇಷ್ಟಲಿಂಗ ಪೂಜೆ

10/03/2024, 19:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಸಾಸಲವಾಡ ಗ್ರಾಮದಲ್ಲಿ ಮಾ8ರ ಶಿವರಾತ್ರಿ ಹಬ್ಬದಂದು, ಜಂಗಮ ಸಮುದಾಯದ ಬಿಜೆಪಿ ಮುಖಂಡರಾದ ಎಂ.ಎಂ. ಚಂದ್ರಶೇಖರಯ್ಯ ಅವರ ಸ್ವಗೃಹದಲ್ಲಿ ಮನೆಯ ಸದಸ್ಯರೆಲ್ಲರೊಡಗೂಡಿ, ಶಿವರಾತ್ರಿ ಹಬ್ಬದ ಪ್ರಯುಕ್ತ ಇಷ್ಟ ಲಿಂಗಪೂಜೆ ನೆರವೇರಿಸುವ ಮೂಲಕ ಹಾಲಿ ಪ್ರಧಾನ ಮಂತ್ರಿಗಳಾಗಿರುವ ನರೇಂದ್ರ ಮೋದಿಯವರು, ಮತ್ತೊಮ್ಮೆ ಪ್ರಧಾನ ಮಂತ್ರಿಗಳಾಗಲೆಂದು ಶಿವನಲ್ಲಿ ಪ್ರಾರ್ಥಿಸಿದ್ದಾರೆ.

ಸಾಸಲವಾಡ ವಾಸಿ ಜಂಗಮ ಸಮುದಾಯದ ಯುವ ಮುಖಂಡರು ಹಾಗೂ ಬಿಜೆಪಿಯ ಮುಖಂಡರಾದ ಚಂದ್ರಶೇಖ ಅವರು ದಶಕಗಳಿಂದಲೂ ಬಿಜೆಪಿ ಪಕ್ಷದ ಮುಖಂಡತ್ವ ನಿರ್ವಹಿಸುತ್ತಿದ್ದು, ಅವರು ಪಕ್ಕಾ ಮೋದಿಯವರ ಅಭಿಮಾನಿಗಳಾಗಿದ್ದಾರೆ. “ನಮ್ಮ ಕುಟುಂಬ ಮೋದಿ ಕುಟುಂಬ” ಗ್ರೂಪ್ ನಲ್ಲಿ ಪ್ರಾರಂಭದಿಂದಲೂ ತುಂಬಾ ಚಟುವಟಿಯಿಳ್ಳವರಾಗಿದ್ದಾರೆ, ಅವರು ತಮ್ಮ ಸ್ವಗೃಹದಲ್ಲಿ ತಮ್ಮ ಮನೆಯ ಸರ್ವ ಸದಸ್ಯರೊಡಗೂಡಿ. ಶಿವರಾತ್ರಿ ಹಬ್ಬದ ಪ್ರಯುಕ್ತ ಧಾರ್ಮಿಕ ವಿದಿವಿಧಾನದಂತೆ ಶಿವ ಪೂಜೆ ನೆರವೇರಿಸಿದ್ದಾರೆ ಮತ್ತು ಮುಂಬರುವ ಚುನಾವಣೆಯಲ್ಲಿ. ಬಿಜೆಪಿ ಅತ್ಯಧಿಕ ಸಂಖ್ಯೆಗಳ ಸ್ಥಾನಗಳಲ್ಲಿ ಜಯಗಳಿಸಿ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು, ಹಾಗೂ ಹಾಲಿ ಪ್ರಧ‍ಾನಿ ನರೇಂದ್ರ ಮೋದಿಯರು. ಮತ್ತೆ ಪ್ರಧಾನ ಮಂತ್ರಿಗಳಾಗಿ ಆಯ್ಕೆಯಾಗಬೇಕೆಂಬ, ತಮ್ಮ ಮಹಾದಾಸೆಗಳನ್ನು ಈಡೇರಿಸುವಂತೆ ಸಂಕಲ್ಪ ಮಾಡಿ ಇಷ್ಟಲಿಂಗ ಪೂಜೆ ನೆರವೇರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು