4:33 AM Monday22 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ಸಾಸಲವಾಡ: ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಇಷ್ಟಲಿಂಗ ಪೂಜೆ

10/03/2024, 19:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಸಾಸಲವಾಡ ಗ್ರಾಮದಲ್ಲಿ ಮಾ8ರ ಶಿವರಾತ್ರಿ ಹಬ್ಬದಂದು, ಜಂಗಮ ಸಮುದಾಯದ ಬಿಜೆಪಿ ಮುಖಂಡರಾದ ಎಂ.ಎಂ. ಚಂದ್ರಶೇಖರಯ್ಯ ಅವರ ಸ್ವಗೃಹದಲ್ಲಿ ಮನೆಯ ಸದಸ್ಯರೆಲ್ಲರೊಡಗೂಡಿ, ಶಿವರಾತ್ರಿ ಹಬ್ಬದ ಪ್ರಯುಕ್ತ ಇಷ್ಟ ಲಿಂಗಪೂಜೆ ನೆರವೇರಿಸುವ ಮೂಲಕ ಹಾಲಿ ಪ್ರಧಾನ ಮಂತ್ರಿಗಳಾಗಿರುವ ನರೇಂದ್ರ ಮೋದಿಯವರು, ಮತ್ತೊಮ್ಮೆ ಪ್ರಧಾನ ಮಂತ್ರಿಗಳಾಗಲೆಂದು ಶಿವನಲ್ಲಿ ಪ್ರಾರ್ಥಿಸಿದ್ದಾರೆ.

ಸಾಸಲವಾಡ ವಾಸಿ ಜಂಗಮ ಸಮುದಾಯದ ಯುವ ಮುಖಂಡರು ಹಾಗೂ ಬಿಜೆಪಿಯ ಮುಖಂಡರಾದ ಚಂದ್ರಶೇಖ ಅವರು ದಶಕಗಳಿಂದಲೂ ಬಿಜೆಪಿ ಪಕ್ಷದ ಮುಖಂಡತ್ವ ನಿರ್ವಹಿಸುತ್ತಿದ್ದು, ಅವರು ಪಕ್ಕಾ ಮೋದಿಯವರ ಅಭಿಮಾನಿಗಳಾಗಿದ್ದಾರೆ. “ನಮ್ಮ ಕುಟುಂಬ ಮೋದಿ ಕುಟುಂಬ” ಗ್ರೂಪ್ ನಲ್ಲಿ ಪ್ರಾರಂಭದಿಂದಲೂ ತುಂಬಾ ಚಟುವಟಿಯಿಳ್ಳವರಾಗಿದ್ದಾರೆ, ಅವರು ತಮ್ಮ ಸ್ವಗೃಹದಲ್ಲಿ ತಮ್ಮ ಮನೆಯ ಸರ್ವ ಸದಸ್ಯರೊಡಗೂಡಿ. ಶಿವರಾತ್ರಿ ಹಬ್ಬದ ಪ್ರಯುಕ್ತ ಧಾರ್ಮಿಕ ವಿದಿವಿಧಾನದಂತೆ ಶಿವ ಪೂಜೆ ನೆರವೇರಿಸಿದ್ದಾರೆ ಮತ್ತು ಮುಂಬರುವ ಚುನಾವಣೆಯಲ್ಲಿ. ಬಿಜೆಪಿ ಅತ್ಯಧಿಕ ಸಂಖ್ಯೆಗಳ ಸ್ಥಾನಗಳಲ್ಲಿ ಜಯಗಳಿಸಿ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು, ಹಾಗೂ ಹಾಲಿ ಪ್ರಧ‍ಾನಿ ನರೇಂದ್ರ ಮೋದಿಯರು. ಮತ್ತೆ ಪ್ರಧಾನ ಮಂತ್ರಿಗಳಾಗಿ ಆಯ್ಕೆಯಾಗಬೇಕೆಂಬ, ತಮ್ಮ ಮಹಾದಾಸೆಗಳನ್ನು ಈಡೇರಿಸುವಂತೆ ಸಂಕಲ್ಪ ಮಾಡಿ ಇಷ್ಟಲಿಂಗ ಪೂಜೆ ನೆರವೇರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು