2:54 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಸಾಲವಾಗಿ ಪಡೆದ ಹಣವನ್ನು ಕಾಲಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು: ಪಿಎಲ್‌ಡಿ ಬ್ಯಾಂಕ್‌ ಉಪಾಧ್ಯಕ್ಷ ಸುಬ್ಬಾರೆಡ್ಡಿ 

24/12/2021, 09:23

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಸಾಲವಾಗಿ ಪಡೆದ ಹಣವನ್ನು ಕಾಲಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು ಎಂದು ಪಿಎಲ್‌ಡಿ ಬ್ಯಾಂಕ್‌ ಉಪಾಧ್ಯಕ್ಷ ಸುಬ್ಬಾರೆಡ್ಡಿ ಹೇಳಿದರು . ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ , ಬ್ಯಾಂಕ್ ರೈತರಿಗೆ ಕೇವಲ ಶೇ .೩ ರ ಬಡ್ಡಿ ದರದಲ್ಲಿ ಸಾಲ ನೀಡುತ್ತಿದೆ . ರೈತರಿಗೆ ಕೃಷಿ ಅಭಿವೃದ್ಧಿಗಾಗಿ ತಲಾ ರೂ .೧೦ ಲಕ್ಷದ ವರೆಗೆ ಸಾಲ ನೀಡಲಾಗುವುದು . ಸಾಲ ವಸೂಲಾತಿ ಪ್ರಮಾಣ ಶೇ .೭೮ ರಷ್ಟಿದೆ ಎಂದು ಹೇಳಿದರು . ಬ್ಯಾಂಕ್‌ನ ಮಾಜಿ ಅಧ್ಯಕ್ಷ ಎಲ್‌.ಗೋಪಾಲಕೃಷ್ಣ ಮಾತನಾಡಿ , ಖಾಸಗಿ ಬ್ಯಾಂಕ್‌ಗಳು ಅಧಿಕ ಬಡ್ಡಿ ವಿಧಿಸಿ ಸಾಲ ನೀಡುತ್ತವೆ . ರಾಷ್ಟ್ರೀಕೃತ ಬ್ಯಾಂಕ್‌ನಿಂದ ಸಾಲ ಪಡೆಯುವುದು ಸುಲಭದ ಮಾತಲ್ಲ . ಇಂಥ ಪರಿಸ್ಥಿತಿಯಲ್ಲಿ ಪಿಎಲ್‌ಡಿ ಬ್ಯಾಂಕ್ ರೈತ ಸ್ನೇಹಿಯಾಗಿ ಆರ್ಥಿಕ ನೆರವು . ನೀಡುತ್ತಿದೆ . ಅದನ್ನು ಉದ್ದೇಶಿತ ಕಾರ್ಯಕ್ಕೆ ಮಾತ್ರ ಬಳಸಬೇಕು . ಬ್ಯಾಂಕ್ ಅಭಿವೃದ್ಧಿ ದೃಷ್ಟಿಯಿಂದ ಸಾಲ ಮರುಪಾವತಿ ಅತ್ಯಗತ್ಯ ಎಂದು ಹೇಳಿದರು . ಈ ಸಂದರ್ಭದಲ್ಲಿ ಪಸಕ್ತ ವರ್ಷದಲ್ಲಿ ಬ್ಯಾಂಕ್ ನಿರ್ವಹಣೆಗೆ ರೂ .೫೫.೪೫ ಲಕ್ಷ ಖರ್ಚು ಮಾಡಲು ಸಭೆ ಅನುಮೋದನೆ ನೀಡಿತು . ನಿರ್ದೇಶಕರಾದ ಟಿ.ವಿ.ಕೃಷ್ಣಾರೆಡ್ಡಿ , ರಾಮಚಂದ್ರಾರೆಡ್ಡಿ , ಶ್ರೀಕಂಠರೆಡ್ಡಿ , ಜಗದೀಶ್ ಕುಮಾರ್ , ನಾರಾಯಣಸ್ವಾಮಿ , ಪಾಪನ್ನ , ಗಂಗಿರೆಡ್ಡಿ , ಟಿ.ಎ.ನಾರಾಯಣಸ್ವಾಮಿ , ನಾಗರಾಜ್ , ಗುರಪ ಮುಖಂಡರಾದ ಅಯ್ಯಪ್ಪ , ಸೀತಾರಾಮರೆಡ್ಡಿ , ಮೋಹನ್ ಕುಮಾರ್ , ವೆಂಕಟಸುಬಾರೆಡ್ಡಿ , ನರಸಿಂಹಪ್ಪ , ವ್ಯವಸ್ಥಾಪಕ ಸಿ.ಎನ್‌.ಈಶ್ವರ್‌ , ವಿ.ಶ್ರೀನಿವಾಸ್ , ಸತೀಶ್ , ಮಂಜುನಾಥ್ , ಕೆ.ಬಿ.ನರೇಶ್‌ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು