12:50 PM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸಾಲವಾಗಿ ಪಡೆದ ಹಣವನ್ನು ಕಾಲಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು: ಪಿಎಲ್‌ಡಿ ಬ್ಯಾಂಕ್‌ ಉಪಾಧ್ಯಕ್ಷ ಸುಬ್ಬಾರೆಡ್ಡಿ 

24/12/2021, 09:23

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಸಾಲವಾಗಿ ಪಡೆದ ಹಣವನ್ನು ಕಾಲಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು ಎಂದು ಪಿಎಲ್‌ಡಿ ಬ್ಯಾಂಕ್‌ ಉಪಾಧ್ಯಕ್ಷ ಸುಬ್ಬಾರೆಡ್ಡಿ ಹೇಳಿದರು . ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ , ಬ್ಯಾಂಕ್ ರೈತರಿಗೆ ಕೇವಲ ಶೇ .೩ ರ ಬಡ್ಡಿ ದರದಲ್ಲಿ ಸಾಲ ನೀಡುತ್ತಿದೆ . ರೈತರಿಗೆ ಕೃಷಿ ಅಭಿವೃದ್ಧಿಗಾಗಿ ತಲಾ ರೂ .೧೦ ಲಕ್ಷದ ವರೆಗೆ ಸಾಲ ನೀಡಲಾಗುವುದು . ಸಾಲ ವಸೂಲಾತಿ ಪ್ರಮಾಣ ಶೇ .೭೮ ರಷ್ಟಿದೆ ಎಂದು ಹೇಳಿದರು . ಬ್ಯಾಂಕ್‌ನ ಮಾಜಿ ಅಧ್ಯಕ್ಷ ಎಲ್‌.ಗೋಪಾಲಕೃಷ್ಣ ಮಾತನಾಡಿ , ಖಾಸಗಿ ಬ್ಯಾಂಕ್‌ಗಳು ಅಧಿಕ ಬಡ್ಡಿ ವಿಧಿಸಿ ಸಾಲ ನೀಡುತ್ತವೆ . ರಾಷ್ಟ್ರೀಕೃತ ಬ್ಯಾಂಕ್‌ನಿಂದ ಸಾಲ ಪಡೆಯುವುದು ಸುಲಭದ ಮಾತಲ್ಲ . ಇಂಥ ಪರಿಸ್ಥಿತಿಯಲ್ಲಿ ಪಿಎಲ್‌ಡಿ ಬ್ಯಾಂಕ್ ರೈತ ಸ್ನೇಹಿಯಾಗಿ ಆರ್ಥಿಕ ನೆರವು . ನೀಡುತ್ತಿದೆ . ಅದನ್ನು ಉದ್ದೇಶಿತ ಕಾರ್ಯಕ್ಕೆ ಮಾತ್ರ ಬಳಸಬೇಕು . ಬ್ಯಾಂಕ್ ಅಭಿವೃದ್ಧಿ ದೃಷ್ಟಿಯಿಂದ ಸಾಲ ಮರುಪಾವತಿ ಅತ್ಯಗತ್ಯ ಎಂದು ಹೇಳಿದರು . ಈ ಸಂದರ್ಭದಲ್ಲಿ ಪಸಕ್ತ ವರ್ಷದಲ್ಲಿ ಬ್ಯಾಂಕ್ ನಿರ್ವಹಣೆಗೆ ರೂ .೫೫.೪೫ ಲಕ್ಷ ಖರ್ಚು ಮಾಡಲು ಸಭೆ ಅನುಮೋದನೆ ನೀಡಿತು . ನಿರ್ದೇಶಕರಾದ ಟಿ.ವಿ.ಕೃಷ್ಣಾರೆಡ್ಡಿ , ರಾಮಚಂದ್ರಾರೆಡ್ಡಿ , ಶ್ರೀಕಂಠರೆಡ್ಡಿ , ಜಗದೀಶ್ ಕುಮಾರ್ , ನಾರಾಯಣಸ್ವಾಮಿ , ಪಾಪನ್ನ , ಗಂಗಿರೆಡ್ಡಿ , ಟಿ.ಎ.ನಾರಾಯಣಸ್ವಾಮಿ , ನಾಗರಾಜ್ , ಗುರಪ ಮುಖಂಡರಾದ ಅಯ್ಯಪ್ಪ , ಸೀತಾರಾಮರೆಡ್ಡಿ , ಮೋಹನ್ ಕುಮಾರ್ , ವೆಂಕಟಸುಬಾರೆಡ್ಡಿ , ನರಸಿಂಹಪ್ಪ , ವ್ಯವಸ್ಥಾಪಕ ಸಿ.ಎನ್‌.ಈಶ್ವರ್‌ , ವಿ.ಶ್ರೀನಿವಾಸ್ , ಸತೀಶ್ , ಮಂಜುನಾಥ್ , ಕೆ.ಬಿ.ನರೇಶ್‌ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು