3:17 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಸಾಲವಾಗಿ ಪಡೆದ ಹಣವನ್ನು ಕಾಲಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು: ಪಿಎಲ್‌ಡಿ ಬ್ಯಾಂಕ್‌ ಉಪಾಧ್ಯಕ್ಷ ಸುಬ್ಬಾರೆಡ್ಡಿ 

24/12/2021, 09:23

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಸಾಲವಾಗಿ ಪಡೆದ ಹಣವನ್ನು ಕಾಲಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು ಎಂದು ಪಿಎಲ್‌ಡಿ ಬ್ಯಾಂಕ್‌ ಉಪಾಧ್ಯಕ್ಷ ಸುಬ್ಬಾರೆಡ್ಡಿ ಹೇಳಿದರು . ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ , ಬ್ಯಾಂಕ್ ರೈತರಿಗೆ ಕೇವಲ ಶೇ .೩ ರ ಬಡ್ಡಿ ದರದಲ್ಲಿ ಸಾಲ ನೀಡುತ್ತಿದೆ . ರೈತರಿಗೆ ಕೃಷಿ ಅಭಿವೃದ್ಧಿಗಾಗಿ ತಲಾ ರೂ .೧೦ ಲಕ್ಷದ ವರೆಗೆ ಸಾಲ ನೀಡಲಾಗುವುದು . ಸಾಲ ವಸೂಲಾತಿ ಪ್ರಮಾಣ ಶೇ .೭೮ ರಷ್ಟಿದೆ ಎಂದು ಹೇಳಿದರು . ಬ್ಯಾಂಕ್‌ನ ಮಾಜಿ ಅಧ್ಯಕ್ಷ ಎಲ್‌.ಗೋಪಾಲಕೃಷ್ಣ ಮಾತನಾಡಿ , ಖಾಸಗಿ ಬ್ಯಾಂಕ್‌ಗಳು ಅಧಿಕ ಬಡ್ಡಿ ವಿಧಿಸಿ ಸಾಲ ನೀಡುತ್ತವೆ . ರಾಷ್ಟ್ರೀಕೃತ ಬ್ಯಾಂಕ್‌ನಿಂದ ಸಾಲ ಪಡೆಯುವುದು ಸುಲಭದ ಮಾತಲ್ಲ . ಇಂಥ ಪರಿಸ್ಥಿತಿಯಲ್ಲಿ ಪಿಎಲ್‌ಡಿ ಬ್ಯಾಂಕ್ ರೈತ ಸ್ನೇಹಿಯಾಗಿ ಆರ್ಥಿಕ ನೆರವು . ನೀಡುತ್ತಿದೆ . ಅದನ್ನು ಉದ್ದೇಶಿತ ಕಾರ್ಯಕ್ಕೆ ಮಾತ್ರ ಬಳಸಬೇಕು . ಬ್ಯಾಂಕ್ ಅಭಿವೃದ್ಧಿ ದೃಷ್ಟಿಯಿಂದ ಸಾಲ ಮರುಪಾವತಿ ಅತ್ಯಗತ್ಯ ಎಂದು ಹೇಳಿದರು . ಈ ಸಂದರ್ಭದಲ್ಲಿ ಪಸಕ್ತ ವರ್ಷದಲ್ಲಿ ಬ್ಯಾಂಕ್ ನಿರ್ವಹಣೆಗೆ ರೂ .೫೫.೪೫ ಲಕ್ಷ ಖರ್ಚು ಮಾಡಲು ಸಭೆ ಅನುಮೋದನೆ ನೀಡಿತು . ನಿರ್ದೇಶಕರಾದ ಟಿ.ವಿ.ಕೃಷ್ಣಾರೆಡ್ಡಿ , ರಾಮಚಂದ್ರಾರೆಡ್ಡಿ , ಶ್ರೀಕಂಠರೆಡ್ಡಿ , ಜಗದೀಶ್ ಕುಮಾರ್ , ನಾರಾಯಣಸ್ವಾಮಿ , ಪಾಪನ್ನ , ಗಂಗಿರೆಡ್ಡಿ , ಟಿ.ಎ.ನಾರಾಯಣಸ್ವಾಮಿ , ನಾಗರಾಜ್ , ಗುರಪ ಮುಖಂಡರಾದ ಅಯ್ಯಪ್ಪ , ಸೀತಾರಾಮರೆಡ್ಡಿ , ಮೋಹನ್ ಕುಮಾರ್ , ವೆಂಕಟಸುಬಾರೆಡ್ಡಿ , ನರಸಿಂಹಪ್ಪ , ವ್ಯವಸ್ಥಾಪಕ ಸಿ.ಎನ್‌.ಈಶ್ವರ್‌ , ವಿ.ಶ್ರೀನಿವಾಸ್ , ಸತೀಶ್ , ಮಂಜುನಾಥ್ , ಕೆ.ಬಿ.ನರೇಶ್‌ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು