5:12 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಸಾಲವಾಗಿ ಪಡೆದ ಹಣವನ್ನು ಕಾಲಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು: ಪಿಎಲ್‌ಡಿ ಬ್ಯಾಂಕ್‌ ಉಪಾಧ್ಯಕ್ಷ ಸುಬ್ಬಾರೆಡ್ಡಿ 

24/12/2021, 09:23

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಸಾಲವಾಗಿ ಪಡೆದ ಹಣವನ್ನು ಕಾಲಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು ಎಂದು ಪಿಎಲ್‌ಡಿ ಬ್ಯಾಂಕ್‌ ಉಪಾಧ್ಯಕ್ಷ ಸುಬ್ಬಾರೆಡ್ಡಿ ಹೇಳಿದರು . ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ , ಬ್ಯಾಂಕ್ ರೈತರಿಗೆ ಕೇವಲ ಶೇ .೩ ರ ಬಡ್ಡಿ ದರದಲ್ಲಿ ಸಾಲ ನೀಡುತ್ತಿದೆ . ರೈತರಿಗೆ ಕೃಷಿ ಅಭಿವೃದ್ಧಿಗಾಗಿ ತಲಾ ರೂ .೧೦ ಲಕ್ಷದ ವರೆಗೆ ಸಾಲ ನೀಡಲಾಗುವುದು . ಸಾಲ ವಸೂಲಾತಿ ಪ್ರಮಾಣ ಶೇ .೭೮ ರಷ್ಟಿದೆ ಎಂದು ಹೇಳಿದರು . ಬ್ಯಾಂಕ್‌ನ ಮಾಜಿ ಅಧ್ಯಕ್ಷ ಎಲ್‌.ಗೋಪಾಲಕೃಷ್ಣ ಮಾತನಾಡಿ , ಖಾಸಗಿ ಬ್ಯಾಂಕ್‌ಗಳು ಅಧಿಕ ಬಡ್ಡಿ ವಿಧಿಸಿ ಸಾಲ ನೀಡುತ್ತವೆ . ರಾಷ್ಟ್ರೀಕೃತ ಬ್ಯಾಂಕ್‌ನಿಂದ ಸಾಲ ಪಡೆಯುವುದು ಸುಲಭದ ಮಾತಲ್ಲ . ಇಂಥ ಪರಿಸ್ಥಿತಿಯಲ್ಲಿ ಪಿಎಲ್‌ಡಿ ಬ್ಯಾಂಕ್ ರೈತ ಸ್ನೇಹಿಯಾಗಿ ಆರ್ಥಿಕ ನೆರವು . ನೀಡುತ್ತಿದೆ . ಅದನ್ನು ಉದ್ದೇಶಿತ ಕಾರ್ಯಕ್ಕೆ ಮಾತ್ರ ಬಳಸಬೇಕು . ಬ್ಯಾಂಕ್ ಅಭಿವೃದ್ಧಿ ದೃಷ್ಟಿಯಿಂದ ಸಾಲ ಮರುಪಾವತಿ ಅತ್ಯಗತ್ಯ ಎಂದು ಹೇಳಿದರು . ಈ ಸಂದರ್ಭದಲ್ಲಿ ಪಸಕ್ತ ವರ್ಷದಲ್ಲಿ ಬ್ಯಾಂಕ್ ನಿರ್ವಹಣೆಗೆ ರೂ .೫೫.೪೫ ಲಕ್ಷ ಖರ್ಚು ಮಾಡಲು ಸಭೆ ಅನುಮೋದನೆ ನೀಡಿತು . ನಿರ್ದೇಶಕರಾದ ಟಿ.ವಿ.ಕೃಷ್ಣಾರೆಡ್ಡಿ , ರಾಮಚಂದ್ರಾರೆಡ್ಡಿ , ಶ್ರೀಕಂಠರೆಡ್ಡಿ , ಜಗದೀಶ್ ಕುಮಾರ್ , ನಾರಾಯಣಸ್ವಾಮಿ , ಪಾಪನ್ನ , ಗಂಗಿರೆಡ್ಡಿ , ಟಿ.ಎ.ನಾರಾಯಣಸ್ವಾಮಿ , ನಾಗರಾಜ್ , ಗುರಪ ಮುಖಂಡರಾದ ಅಯ್ಯಪ್ಪ , ಸೀತಾರಾಮರೆಡ್ಡಿ , ಮೋಹನ್ ಕುಮಾರ್ , ವೆಂಕಟಸುಬಾರೆಡ್ಡಿ , ನರಸಿಂಹಪ್ಪ , ವ್ಯವಸ್ಥಾಪಕ ಸಿ.ಎನ್‌.ಈಶ್ವರ್‌ , ವಿ.ಶ್ರೀನಿವಾಸ್ , ಸತೀಶ್ , ಮಂಜುನಾಥ್ , ಕೆ.ಬಿ.ನರೇಶ್‌ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು