2:59 AM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಅರಿವಿನ ಬೆಳಕು ತೋರಿದ ಗುರುವಿಗೆ ವಂದನೆ: ಶಾಸಕ ವೇದವ್ಯಾಸ್ ಕಾಮತ್

10/07/2025, 20:27

ಮಂಗಳೂರು(reporterkarnataka.com): ಕೆನರಾ ಹೈಸ್ಕೂಲ್ ಉರ್ವ ಮತ್ತು ಡೊಂಗರಕೇರಿಯಲ್ಲಿ ಸುಧೀರ್ಘ ಅವಧಿಯವರೆಗೆ ಶಿಕ್ಷಕರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಹೊಯ್ಗೆಬೈಲ್ ನಲ್ಲಿ ನಿವೃತ್ತ ಜೀವನ ನಡೆಸುತ್ತಿರುವ ಮಾಧವ ಸುವರ್ಣ ರವರ ಮನೆಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಗುರು ಪೂರ್ಣಿಮೆಯ ಪ್ರಯುಕ್ತ ಭೇಟಿ ನೀಡಿ ಗುರು ವಂದನೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಶಾಸಕರು, ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದಲ್ಲಿ ಶಾಲಾ ದಿನಗಳು ಹಾಗೂ ಶಿಕ್ಷಕರು ಅತ್ಯಂತ ಮಹತ್ವದ ಪಾತ್ರ ವಹಿಸುತ್ತಾರೆ. ಅಂತಹ ಕಾಲಘಟ್ಟದಲ್ಲಿ ನಮ್ಮನ್ನೆಲ್ಲಾ ತಿದ್ದಿ ತೀಡಿ ಬದುಕಿನ ದಾರಿ ತೋರಿ ಬೆಳಕಾದವರು ಈ ನನ್ನ ಗುರುಗಳು. ನನ್ನಂತಹ ಸಾವಿರಾರು ವಿದ್ಯಾರ್ಥಿಗಳು ಅವರಿಗಿದ್ದರೂ, ನಮಗೆಲ್ಲರಿಗೂ ಅವರೇ ಪ್ರಾತಃ ಸ್ಮರಣೀಯರು. ಇಂದಿಗೂ ಅವರು ಭಗವದ್ಗೀತೆ, ರಾಮಾಯಣ, ಭಜನೆ, ಸತ್ಸಂಗಗಳು, ಪ್ರವಚನಗಳನ್ನು ನಿರಂತರವಾಗಿ ನಡೆಸಿಕೊಡುತ್ತಿದ್ದು, ವಿಶೇಷವಾಗಿ ಮಕ್ಕಳಿಗೆ ನೀಡುತ್ತಿರುವ ಧಾರ್ಮಿಕ ಶಿಕ್ಷಣ ಸರ್ವ ಶ್ರೇಷ್ಠವಾದುದು. ಮಂಗಳೂರಿನಲ್ಲಿ ನಿಧಿ ಬಿಲ್ಡರ್ಸ್ ಮಾಲೀಕರಾಗಿರುವ ಪ್ರಶಾಂತ್ ಸನಿಲ್ ಹಾಗೂ ಬೆಂಗಳೂರಿನಲ್ಲಿ ಖ್ಯಾತ ಉದ್ಯಮಿಯಾಗಿರುವ ಶರತ್ ಚಂದ್ರ ಸನಿಲ್ ಎಂಬ ಪುತ್ರರು ಇವರಿಗಿದ್ದಾರೆ. ಗುರು ಪೂರ್ಣಿಮೆಯ ದಿನ ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದು ಅತೀವ ಖುಷಿ ತಂದಿದ್ದು, ಗುರುಗಳ ಮಾರ್ಗದರ್ಶನ, ಸಲಹೆ, ಸೂಚನೆಯನ್ನು ಪಾಲಿಸುವುದು ನಮ್ಮ ಕರ್ತವ್ಯ ಎಂದು ಭಾವಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಗಣೇಶ್ ಕುಲಾಲ್, ತಾರಾನಾಥ್ ಉರ್ವ, ಗೌತಮ್ ಸಾಲ್ಯಾನ್, ರಾಕೇಶ್ ಸಾಲ್ಯಾನ್, ಸಾಯಿಪ್ರಸಾದ್ ಶೆಟ್ಟಿ ಹಾಗೂ ಮಾಧವ ಸುವರ್ಣರ ಕುಟುಂಬಸ್ಥರು, ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು