1:45 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಅರಿವಿನ ಬೆಳಕು ತೋರಿದ ಗುರುವಿಗೆ ವಂದನೆ: ಶಾಸಕ ವೇದವ್ಯಾಸ್ ಕಾಮತ್

10/07/2025, 20:27

ಮಂಗಳೂರು(reporterkarnataka.com): ಕೆನರಾ ಹೈಸ್ಕೂಲ್ ಉರ್ವ ಮತ್ತು ಡೊಂಗರಕೇರಿಯಲ್ಲಿ ಸುಧೀರ್ಘ ಅವಧಿಯವರೆಗೆ ಶಿಕ್ಷಕರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಹೊಯ್ಗೆಬೈಲ್ ನಲ್ಲಿ ನಿವೃತ್ತ ಜೀವನ ನಡೆಸುತ್ತಿರುವ ಮಾಧವ ಸುವರ್ಣ ರವರ ಮನೆಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಗುರು ಪೂರ್ಣಿಮೆಯ ಪ್ರಯುಕ್ತ ಭೇಟಿ ನೀಡಿ ಗುರು ವಂದನೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಶಾಸಕರು, ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದಲ್ಲಿ ಶಾಲಾ ದಿನಗಳು ಹಾಗೂ ಶಿಕ್ಷಕರು ಅತ್ಯಂತ ಮಹತ್ವದ ಪಾತ್ರ ವಹಿಸುತ್ತಾರೆ. ಅಂತಹ ಕಾಲಘಟ್ಟದಲ್ಲಿ ನಮ್ಮನ್ನೆಲ್ಲಾ ತಿದ್ದಿ ತೀಡಿ ಬದುಕಿನ ದಾರಿ ತೋರಿ ಬೆಳಕಾದವರು ಈ ನನ್ನ ಗುರುಗಳು. ನನ್ನಂತಹ ಸಾವಿರಾರು ವಿದ್ಯಾರ್ಥಿಗಳು ಅವರಿಗಿದ್ದರೂ, ನಮಗೆಲ್ಲರಿಗೂ ಅವರೇ ಪ್ರಾತಃ ಸ್ಮರಣೀಯರು. ಇಂದಿಗೂ ಅವರು ಭಗವದ್ಗೀತೆ, ರಾಮಾಯಣ, ಭಜನೆ, ಸತ್ಸಂಗಗಳು, ಪ್ರವಚನಗಳನ್ನು ನಿರಂತರವಾಗಿ ನಡೆಸಿಕೊಡುತ್ತಿದ್ದು, ವಿಶೇಷವಾಗಿ ಮಕ್ಕಳಿಗೆ ನೀಡುತ್ತಿರುವ ಧಾರ್ಮಿಕ ಶಿಕ್ಷಣ ಸರ್ವ ಶ್ರೇಷ್ಠವಾದುದು. ಮಂಗಳೂರಿನಲ್ಲಿ ನಿಧಿ ಬಿಲ್ಡರ್ಸ್ ಮಾಲೀಕರಾಗಿರುವ ಪ್ರಶಾಂತ್ ಸನಿಲ್ ಹಾಗೂ ಬೆಂಗಳೂರಿನಲ್ಲಿ ಖ್ಯಾತ ಉದ್ಯಮಿಯಾಗಿರುವ ಶರತ್ ಚಂದ್ರ ಸನಿಲ್ ಎಂಬ ಪುತ್ರರು ಇವರಿಗಿದ್ದಾರೆ. ಗುರು ಪೂರ್ಣಿಮೆಯ ದಿನ ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದು ಅತೀವ ಖುಷಿ ತಂದಿದ್ದು, ಗುರುಗಳ ಮಾರ್ಗದರ್ಶನ, ಸಲಹೆ, ಸೂಚನೆಯನ್ನು ಪಾಲಿಸುವುದು ನಮ್ಮ ಕರ್ತವ್ಯ ಎಂದು ಭಾವಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಗಣೇಶ್ ಕುಲಾಲ್, ತಾರಾನಾಥ್ ಉರ್ವ, ಗೌತಮ್ ಸಾಲ್ಯಾನ್, ರಾಕೇಶ್ ಸಾಲ್ಯಾನ್, ಸಾಯಿಪ್ರಸಾದ್ ಶೆಟ್ಟಿ ಹಾಗೂ ಮಾಧವ ಸುವರ್ಣರ ಕುಟುಂಬಸ್ಥರು, ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು