4:18 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸಮಾಜದಲ್ಲಿ ಮಕ್ಕಳನ್ನು ಗೌರವದಿಂದ ಕಾಣಬೇಕು: ಶರಣಗೌಡ

06/01/2022, 10:56

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಸಮಾಜದಲ್ಲಿ ಮಕ್ಕಳನ್ನು ಗೌರವದಿಂದ, ಪ್ರೀತಿ ವಾತ್ಸಲ್ಯದಿಂದ, ಮಮಕಾರದಿಂದ ಉತ್ತಮ ರೀತಿಯಲ್ಲಿ ನೋಡಿಕೊಳ್ಳಬೇಕು. ಪಾಲಕರು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು.

ಮುಂದೊಂದು ದಿನ ವಿದ್ಯಾವಂತರಾಗಿ ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರುವಾಗ ತಂದೆ-ತಾಯಿಗೆ ಕಲಿಸಿದ ಶಾಲೆಗೆ ಮತ್ತು ಶಿಕ್ಷಕರಿಗೆ ಗೌರವ, ಪ್ರೀತಿ ಸಿಗುತ್ತದೆ ಎಂದು ಮಸ್ಕಿ ವಿಭಾಗದ ವಾಟಗಲ್ ಗ್ರಾಮದಲ್ಲಿ ಜಿಲ್ಲಾ ಸಮನ್ವಯ ಅಧಿಕಾರಿ ಶರಣೆಗೌಡ ಚಿತ್ತಾಪುರ ಹೇಳಿದರು.

15 ವರ್ಷ ಮೇಲ್ಪಟ್ಟ ಎಲ್ಲ ಮಕ್ಕಳಿಗೆ ಕೋವಿಡ್ ಲಸಿಕೆ ಹಾಕುವ ಕುರಿತು ಅವರು ಮಾತನಾಡಿದರು.

ಎಲ್ಲ ಪಾಲಕರು ಮಕ್ಕಳನ್ನು ಗೌರವದಿಂದ ನೋಡಿಕೊಳ್ಳಬೇಕು. ಅಲ್ಲದೆ ಅವರಿಗೆ ಸರಿಯಾದ ಸಂಸ್ಕಾರ ಕಲಿಸಿಕೊಡಬೇಕು. ಸಂಸ್ಕಾರದಿಂದ ಮಕ್ಕಳು ಸಮಾಜದಲ್ಲಿ ನಾವು ಹೇಗೆ ಬದುಕಬೇಕು ಎಂಬುದನ್ನು ತಿಳಿದುಕೊಳ್ಳುತ್ತಾರೆ. ಅಂತಹ ಯುವಕರು ತಮ್ಮ ಪ್ರತಿಭೆಯ ಹೊರಹಾಕಿದಾಗ ಸಾಮಾನ್ಯ ಜ್ಞಾನ ಸಮಾಜಕ್ಕೆ ಮುಟ್ಟುವ ಸಾಧ್ಯತೆ ಇದ್ದು ಮುರಾರ್ಜಿ ವಸತಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ಸರಿಯಾದ ಉತ್ತಮ ರೀತಿಯಲ್ಲಿ ಓದಬೇಕು. ಸರಿಯಾದ ಅಂಕವನ್ನು ಪಡೆದುಕೊಂಡಾಗ ಪಾಸಾದಾಗ ಶಾಲೆಗೆ ಮತ್ತು ತಂದೆ-ತಾಯಿಗೆ ಕೀರ್ತಿ ಬರುತ್ತದೆ ಎಂದರು.

ಮಕ್ಕಳ ಬಗ್ಗೆ ಪಾಲಕರು ಗಮನಹರಿಸಿದಾಗ ಮಕ್ಕಳು ಮುಂದೆ ಬರಲು ಸಾಧ್ಯ. ಕಡು ಬಡತನದಲ್ಲಿರುವ ಪಾಲಕರು ಮಕ್ಕಳಿಗೆ ಸರಿಯಾದ ಸಂಸ್ಕಾರ ಕಳಿಸಿಕೊಡಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಉಪನ್ಯಾಸಕರು, ಊರಿನ ಪ್ರಮುಖರು ಸೇರಿದಂತೆ ಇನ್ನಿತರ ಭಾಗವಹಿಸಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು