2:13 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ. ಸಿದ್ದಲಿಂಗಯ್ಯ ಸಮಾಧಿ ನಿರ್ಮಿಸಿ: ಛಲವಾದಿ ನಾರಾಯಣಸ್ವಾಮಿ

20/11/2025, 18:48

ಬೆಂಗಳೂರು(reporterkarnataka.com): ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ ಹಾಗೂ ಕವಿ ಡಾ. ಸಿದ್ದಲಿಂಗಯ್ಯ ಅವರ ಸಮಾಧಿ ನಿರ್ಮಿಸಲಿ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ
ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಸಾಲುಮರದ ತಿಮ್ಮಕ್ಕ ತೀರಿಕೊಂಡ್ರು. ಅವರನ್ನ ವೃಕ್ಷ ಮಾತೆ ಅಂತೀವಿ. ಅವರನ್ನು ಕಲಾಗ್ರಾಮದಲ್ಲಿ ಅಂತ್ಯಕ್ರಿಯೆ ಮಾಡಿದ್ರು. ಯು.ಆರ್ ಅನಂತಮೂರ್ತಿ ಹಾಗೂ ಕವಿ ಡಾ. ಸಿದ್ದಲಿಂಗಯ್ಯ ಅವರದ್ದೂ ಅಲ್ಲೇ ಅಂತ್ಯಕ್ರಿಯೆ ಆಗಿದೆ. ಮೂವರದ್ದೂ ಅಲ್ಲಿ ಸ್ಮಾರಕ ಮಾಡಬೇಕು ಎಂದು ಸರ್ಕಾರಕ್ಕೆ ನಾರಾಯಣಸ್ವಾಮಿ ಒತ್ತಾಯ ಮಾಡಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ನಿನ್ನೆ 7 ಕೋಟಿ ಹಗಲು ದರೋಡೆ ಆಗಿದೆ. ಈ ಸರ್ಕಾರ ಬದುಕಿದೆಯಾ.? ಕೊಪ್ಪಳ, ಮಂಗಳೂರು ನಲ್ಲಿ ಕೂಡ ಆಗಿದೆ ಎಂದು ಅವರು ನುಡಿದರು.
ಬೆಂಗಳೂರಿನಲ್ಲಿ ಹಾಡಹಗಲೇ ದರೋಡೆ ಅಗಿದೆ, ಪತ್ತೆ ಹಚ್ತೀವಿ ಅಂತಾರೆ. ಅತ್ಯಾಚಾರ, ದರೋಡೆ, ಕೊಲೆ ಆಗ್ತಿದೆ. ಇವರಿಗೆ ಯಾವುದನ್ನೂ ತಡೆಯಲು ಆಗ್ತಿಲ್ಲ. ಸೋಶಿಯಲಿಸ್ಟ್ ಮಾತುಗಳನ್ನ ಆಡ್ತಾರೆ. ದಲಿತರ ಬಗ್ಗೆ ಮಾತಾಡ್ತಿದ್ದಾರೆ, 31 ಬಿಲ್‌ನಲ್ಲಿ ಯಾಕೆ ಆ ಬಿಲ್ ಇಲ್ಲ ಎಂದು ಛಲವಾದಿ ಪ್ರಶ್ನಿಸಿದರು.
ಪರಿಶಿಷ್ಟ ಜಾತಿ ಮತ್ತು ವರ್ಗ ಅಂತ ಕೇಂದ್ರ ಸರ್ಕಾರ ಎರಡು ಆಯೋಗ ಮಾಡಿದೆ.ಇಲ್ಲಿ ಆಯೋಗ ಇದೆ, ಕೆಲಸ ಮಾಡ್ತಿಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು