8:17 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ. ಸಿದ್ದಲಿಂಗಯ್ಯ ಸಮಾಧಿ ನಿರ್ಮಿಸಿ: ಛಲವಾದಿ ನಾರಾಯಣಸ್ವಾಮಿ

20/11/2025, 18:48

ಬೆಂಗಳೂರು(reporterkarnataka.com): ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ ಹಾಗೂ ಕವಿ ಡಾ. ಸಿದ್ದಲಿಂಗಯ್ಯ ಅವರ ಸಮಾಧಿ ನಿರ್ಮಿಸಲಿ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ
ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಸಾಲುಮರದ ತಿಮ್ಮಕ್ಕ ತೀರಿಕೊಂಡ್ರು. ಅವರನ್ನ ವೃಕ್ಷ ಮಾತೆ ಅಂತೀವಿ. ಅವರನ್ನು ಕಲಾಗ್ರಾಮದಲ್ಲಿ ಅಂತ್ಯಕ್ರಿಯೆ ಮಾಡಿದ್ರು. ಯು.ಆರ್ ಅನಂತಮೂರ್ತಿ ಹಾಗೂ ಕವಿ ಡಾ. ಸಿದ್ದಲಿಂಗಯ್ಯ ಅವರದ್ದೂ ಅಲ್ಲೇ ಅಂತ್ಯಕ್ರಿಯೆ ಆಗಿದೆ. ಮೂವರದ್ದೂ ಅಲ್ಲಿ ಸ್ಮಾರಕ ಮಾಡಬೇಕು ಎಂದು ಸರ್ಕಾರಕ್ಕೆ ನಾರಾಯಣಸ್ವಾಮಿ ಒತ್ತಾಯ ಮಾಡಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ನಿನ್ನೆ 7 ಕೋಟಿ ಹಗಲು ದರೋಡೆ ಆಗಿದೆ. ಈ ಸರ್ಕಾರ ಬದುಕಿದೆಯಾ.? ಕೊಪ್ಪಳ, ಮಂಗಳೂರು ನಲ್ಲಿ ಕೂಡ ಆಗಿದೆ ಎಂದು ಅವರು ನುಡಿದರು.
ಬೆಂಗಳೂರಿನಲ್ಲಿ ಹಾಡಹಗಲೇ ದರೋಡೆ ಅಗಿದೆ, ಪತ್ತೆ ಹಚ್ತೀವಿ ಅಂತಾರೆ. ಅತ್ಯಾಚಾರ, ದರೋಡೆ, ಕೊಲೆ ಆಗ್ತಿದೆ. ಇವರಿಗೆ ಯಾವುದನ್ನೂ ತಡೆಯಲು ಆಗ್ತಿಲ್ಲ. ಸೋಶಿಯಲಿಸ್ಟ್ ಮಾತುಗಳನ್ನ ಆಡ್ತಾರೆ. ದಲಿತರ ಬಗ್ಗೆ ಮಾತಾಡ್ತಿದ್ದಾರೆ, 31 ಬಿಲ್‌ನಲ್ಲಿ ಯಾಕೆ ಆ ಬಿಲ್ ಇಲ್ಲ ಎಂದು ಛಲವಾದಿ ಪ್ರಶ್ನಿಸಿದರು.
ಪರಿಶಿಷ್ಟ ಜಾತಿ ಮತ್ತು ವರ್ಗ ಅಂತ ಕೇಂದ್ರ ಸರ್ಕಾರ ಎರಡು ಆಯೋಗ ಮಾಡಿದೆ.ಇಲ್ಲಿ ಆಯೋಗ ಇದೆ, ಕೆಲಸ ಮಾಡ್ತಿಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು