1:31 AM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಸಮಾಜದ ಕಟ್ಟ ಕಡೆಯರಿಗೂ ನಾಗರಿಕ ಸೌಲಭ್ಯ ಕಲ್ಪಿಸುವ ಗುರಿ ಪ್ರಧಾನಿ ಮೋದಿ ಅವರದ್ದು: ಸಚಿವ ಅಶ್ವಥ್ ನಾರಾಯಣ್

21/02/2023, 20:53

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಸಮಾಜದ ಕಟ್ಟ ಕಡೆಯವರಿಗೂ ನಾಗರೀಕ ಸೌಲಭ್ಯ ದೊರಕುವಂತೆ ದೂರದೃಷ್ಟಿಯ ಯೋಜನೆ, ಜಾರಿಗೊಳಿಸಿದ ಏಕೈಕ ವ್ಯಕ್ತಿ ಪ್ರಧಾನಮಂತ್ರಿ ನರೇಂದ್ರ ಮೋದಿ ಯವರು ಎಂದು ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್ ಹೇಳಿದರು.

ಅವರು ನಾಗಮಂಗಲ ತಾಲೂಕು ಭಾರತೀಯ ಜನತಾ ಪಾರ್ಟಿ ಆಯೋಜನೆ ಮಾಡಿದ್ದ ತಾಲೂಕು ಕ್ರೀಡಾಂಗಣದಲ್ಲಿ ಅದ್ದೂರಿ ಮಹಿಳಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಚಿಂತನೆ ಸಾಧನೆ ಸೇವೆಗಳು ಗುಜರಾತ್ ಮುಖ್ಯಮಂತ್ರಿ ಆಗಿ ಜನಪರ ಕಾಳಜಿ ಅಂದಿನ ಯೋಜನೆ ಇಂದು ಇಡೀ ದೇಶವ್ಯಾಪಿ ಪ್ರಧಾನಮಂತ್ರಿಯಾಗಿ ಅವರ ದೂರದೃಷ್ಟಿಯ ಅಭಿವೃದ್ಧಿ ಯೋಜನೆ ಜಾರಿಗೆ ತಂದಿರುವುದು ಅವರ ಅಭಿವೃದ್ಧಿ ಚಿಂತನೆಗೆ ಸಾಕ್ಷಿ ಭೂತವಾಗಿದೆ.

ಪ್ರತಿ ಮನೆಮನೆಗೂ ಕುಡಿಯುವ ನೀರಿನ ಜಲಜೀವನ್ ಮಿಷನ್ ಇಂದು ನಾಗಮಂಗಲ ತಾಲೂಕಿನ ಜನತೆಗೆ ದೊರಕಿರುವ ಬೃಹತ್ ಕುಡಿಯುವ ನೀರಿನ ಯೋಜನೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆ, ನಿರೀಕ್ಷಿತ ಮಟ್ಟದಲ್ಲಿ ಕಟ್ಟಕಡೆಯ ಭಾಗಕ್ಕೂ ನೀಡುವ ಕೆಲಸವಾಗಿದೆ.
ವಿಶ್ವದ ತಂತ್ರಜ್ಞಾನ ಮಾದರಿ ಅಂತರಾಷ್ಟ್ರೀಯ ಮಟ್ಟದಲ್ಲಿ ದೊರಕುವಂತಹ ಸೌಲಭ್ಯಗಳು ಭಾರತ ತನ್ನ ಕೌಶಲ್ಯಾಭಿವೃದ್ಧಿ ಯೋಜನೆಗೆ ಮೋದಿಯವರು ನೀಡಿರುವ ಅನೇಕ ಕೆಲಸಗಳು ನಮ್ಮ ಮುಂದಿವೆ ಎಂದು ತಿಳಿಸಿದರು.
ಮುಂದುವರೆದ ದೇಶಗಳಲ್ಲಿ ಸಾಧನೆ ಆಗದೆ ಇದ್ದಂತಹ ಕೆಲಸಗಳನ್ನು ನರೇಂದ್ರ ಮೋದಿಜಿ ಅವರು ಅಭಿವೃದ್ಧಿಯ ಪಥವನ್ನು ಮುನ್ನಡೆಸಿದ್ದಾರೆ.
ಈ ಬಾರಿ ನಿಮ್ಮ ನಡೆ ನಮ್ಮೆಲ್ಲರ ಸಹಕಾರ ಭಾರತೀಯ ಜನತಾ ಪಾರ್ಟಿಯ ಬೆಂಬಲಿಸುವ ಮುಖಾಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬೆಂಬಲಿಸಬೇಕೆಂದು ತಿಳಿಸಿದರು.

ಸಮಾರಂಭದಲ್ಲಿ ರಾಜ್ಯ ಹಿರಿಯ ಬಿಜೆಪಿ ಉಪಾಧ್ಯಕ್ಷರಾದ ನಿರ್ಮಲ್ ಕುಮಾರಸುರಾನ. ಮಾರುತಿರಾವ್. ಪವರ್ ಜಿಲ್ಲಾಧ್ಯಕ್ಷರಾದ ಉಮೇಶ್ ರವರುಗಳು ಮಾತನಾಡಿದರು.

ಸಮಾರಂಭದಲ್ಲಿ ಬಿಜೆಪಿ ಮುಖಂಡರಾದ ಮಲ್ಲಿಕಾರ್ಜುನ್ ಫೈಟರ್ ರವಿ ಅಧ್ಯಕ್ಷರಾದ ಗೀತಾ ವಿವೇಕಾನಂದ ಹಾಗೂ ಬಿಜೆಪಿ ಮುಖಂಡರಾದ ವಿಷ್ಣುಮೂರ್ತಿ ಭಟ್ ರವರು ಹಾಗೂ ಮಹಿಳಾ ಮುಖಂಡರು ಹಾಗೂ ಅನೇಕ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು