11:38 PM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಸಮಾಜದ ಎಲ್ಲ ಜನರ ಆರ್ಥಿಕ ಸಬಲತೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಯತ್ನ: ಕೃಷ್ಣೇಗೌಡ ಶ್ಲಾಘನೆ

25/08/2021, 09:16

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಸಮಾಜದ ಕಟ್ಟಕಡೆಯ ಜನರಿಗೂ ಆರ್ಥಿಕ ಸಬಲತೆ ಏಳಿಗೆಯ ಉದ್ದೇಶದಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಮುಂಚೂಣಿಯಲ್ಲಿರುವುದು ಎಂದು ಕೃಷ್ಣೆಗೌಡ ಅಭಿಪ್ರಾಯಪಟ್ಟರು.

ಅವರು ನಾಗಮಂಗಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಹಾಗೂ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಅವರುಗಳು ಕಚೇರಿಯಲ್ಲಿ ಸೇವಾ ಕೇಂದ್ರ ಹಾಗೂ ನವಜೀವನ ಪೋಷಕರ ತರಬೇತಿ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮೀಣ ಜೀವನದ ಸಬಲೀಕರಣ ಹಾಗೂ 

ಆರ್ಥಿಕ ಸಬಲತೆಗೆ ಪ್ರಮುಖ ಧ್ಯೇಯವಾಗಿ ಯೋಜನೆಗಳನ್ನು  ಸಮಾಜದ ಕಟ್ಟಕಡೆಯ ಜನರಿಗೂ ತಲುಪಿಸಿ, ಆರ್ಥಿಕವಾಗಿ ಮುಂದೆ ಬರುವಂತೆ ಮಾಡುವುದು ಗ್ರಾಮಾಭಿವೃದ್ಧಿ ಸಂಸ್ಥೆಯ ಯೋಜನೆಗಳೇ ಸಾಕ್ಷಿ ಎಂದು ತಿಳಿಸಿದರು. 

ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ರಾಜ್ಯದ ಹಾಗೂ ಜಿಲ್ಲಾ ತಾಲೂಕು ಗಳಲ್ಲಿ ಸೇವಾ ಕೇಂದ್ರಗಳಿಂದ ಜನರಿಗೆ ದೊರೆಯಬಹುದಾದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳುವ ಉದ್ದೇಶದಿಂದ ಕೇಂದ್ರವನ್ನು ಅನುಷ್ಠಾನ ಮಾಡುತ್ತಿರುವುದಾಗಿ ಜಿಲ್ಲಾ ನಿರ್ದೇಶಕರಾದ ಗಂಗಾಧರ ರೈ ತಿಳಿಸಿದರು .

ಸಮಾರಂಭದಲ್ಲಿ ತಾಲ್ಲೂಕು ಯೋಜನಾಧಿಕಾರಿ ಹೇಮಲತಾ ಹೆಗಡೆ, ಜನಜಾಗೃತಿಯ ಸದಸ್ಯರಾದ ಮಂಜೇಶ್ ಕಲೀಂ ಉಲ್ಲಾ, ವಿನಯ್ ಕುಲಕರ್ಣಿ, ಭಾಸ್ಕರ್ ಹಾಗೂ ಸೇವಾ ಪ್ರತಿನಿಧಿಗಳು ಭಾಗವಹಿಸಿದ್ದರು 

ಇತ್ತೀಚಿನ ಸುದ್ದಿ

ಜಾಹೀರಾತು