2:02 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಸಮಾಜಘಾತಕರಿಗೆ ಸಿಂಹಸ್ವಪ್ನವಾಗಿದ್ದ ಠಾಣೆ ಇದೀಗ ಕೇಳುವವರಿಲ್ಲ!: ಗೃಹ ಸಚಿವರೇ, ಮುಚ್ಚಿಹೋದ ಬದನವಾಳು ಉಪ ಪೊಲೀಸ್ ಠಾಣೆಗೆ ಕಾಯಕಲ್ಪ ಎಂದು?

08/07/2024, 16:19

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಿ.ಶ್ರೀನಿವಾಸ್ ಪ್ರಸಾದ್ ಹಾಗೂ ದಿ.ಧೃವನಾರಾಯಣ್ ರವರ ನಿರಂತರ ಒತ್ತಡಕ್ಕೆ ಮಣಿದ ಸರ್ಕಾರ ಸ್ಥಾಪಿಸಿದ ಬದನವಾಳು ಉಪ ಪೊಲೀಸ್ ಠಾಣೆ ಅವಸಾನದ ಅಂಚಿಗೆ ತಲುಪಿದೆ. ಪೊಲೀಸ್ ಇಲಾಖೆಯ ನಿರ್ಲಕ್ಷ್ಯಕ್ಕೆ ಒಳಗಾಗಿ ನಿರಪಯುಕ್ತವಾಗಿ ಪಾಳು ಬಿದ್ದಿದೆ. ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಿಸಿದ ಸುಸಜ್ಜಿತ ಕಟ್ಟಡ ಬಳಕೆಗೆ ಬಾರದೆ ಮೂಕ ರೋಧನೆ ಅನುಭವಿಸುತ್ತಿದೆ.
ಕಿಡಿಗೇಡಿಗಳು ಸಮಾಜ ಘಾತಕರಿಗೆ ಸಿಂಹಸ್ವಪ್ನವಾಗಿದ್ದ ಠಾಣೆ ಇದೀಗ ಕೇಳುವವರಿಲ್ಲದೆ ಅಸ್ತಿತ್ವಕ್ಕಾಗಿ ಎದುರು ನೋಡುತ್ತಿದೆ.
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಹಿಂದೆ ನಡೆದ ಮತೀಯ ಸಂಘರ್ಷ ರಾಜ್ಯದಲ್ಲಿ ಮತ್ತು ದೇಶದಲ್ಲಿ ಸಂಚಲನ ಮೂಡಿಸಿತ್ತು. ಕಿಡಿಗೇಡಿಗಳ ಅಟ್ಟಹಾಸಕ್ಕೆ ಬದನವಾಳು ಗ್ರಾಮ ನಲುಗಿತ್ತು. ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಖದೀಮರ ಹೆಡೆಮುರಿ ಕಟ್ಟುವ ಉದ್ದೇಶದಿಂದಲೇ ಇಲ್ಲೊಂದು ಉಪಠಾಣೆ ಸ್ಥಾಪನೆ ಆಗಲೇಬೇಕೆಂದು ಪಟ್ಟುಹಿಡಿದ ಶ್ರೀನಿವಾಸ್ ಪ್ರಸಾದ್ ಹಾಗೂ ಧೃವನಾರಾಯಣ್ ಸರ್ಕಾರದ ಕಣ್ಣು ತೆರೆಸಿ ಯಶಸ್ವಿಯಾಗಿ 1992-93ನೇ ಸಾಲಿನಲ್ಲಿ ಲಕ್ಷಾಂತರ ರೂ. ಖರ್ಚು ಮಾಡಿ ಠಾಣೆ ಚಾಲನೆಗೆ ಬಂತು. ಹತ್ತಾರು ವರ್ಷಗಳ ಕಾಲ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಾರ್ವಜನಿಕರ ಹಿತರಕ್ಷಣೆಗಾಗಿ ಸ್ಪಂದಿಸಿದ ಪೊಲೀಸ್ ಠಾಣೆ ಇದೀಗ ಸಾಕಷ್ಟು ಅನುಕೂಲಗಳಿದ್ದ ಸುಸಜ್ಜಿತ ಕಟ್ಟಡ ಕ್ರಮೇಣ ಅವಸಾನದ ಅಂಚಿಗೆ ತಲುಪಿದೆ. ಲಕ್ಷಾಂತರ ರೂ ವೆಚ್ಚ ಮಾಡಿದ ಕಟ್ಟಡಕ್ಕೆ ಸೂಕ್ತ ನಿರ್ವಹಣೆ ಇಲ್ಲದೆ ಸೊರಗಿದೆ. ಇಲ್ಲಿ ನಡೆಯಬೇಕಿದ್ದ ಕಾರ್ಯಚಟುವಟಿಕೆಗಳು ದೊಡ್ಡ ಕವಲಂದೆ ಪೊಲೀಸ್ ಠಾಣೆಗೆ ಶಿಫ್ಟ್ ಆಗಿದೆ. ಬದನವಾಳು ಗ್ರಾಮದಲ್ಲಿ ಮುಚ್ಚಿ ಹೋಗಿರುವ ಸುಸಜ್ಜಿತ ಕೊಠಡಿಯಲ್ಲಿ ಎರಡು ಸೆಲ್ ಗಳಿವೆ. ಪೀಠೋಪಕರಣಗಳು ಸಧ್ಯ ಗೆದ್ದಲು ಹಿಡಿದಿದೆ. ಕೇಳುವವರಿಲ್ಲದ ಕಾರಣ ಅನೈತಿಕ ಚಟುವಟಿಕೆಗಳ ತಾಣವಾಗಿದೆ ಎನ್ನಲಾಗಿದೆ. ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳಿದ್ದರೂ ಇದನ್ನ ಕಡೆಗಣಿಸಿದ್ದೇಕೆ ಎಂಬ ಪ್ರಶ್ನೆಗೆ ಉತ್ತರ ಸಿಗುತ್ತಿಲ್ಲ.


ನಂಜನಗೂಡು ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಈ ಉಪ ಪೊಲೀಸ್ ಠಾಣೆಗೆ ಜೀವ ತುಂಬಲು
ಗೃಹ ಸಚಿವರೇ ಮನಸ್ಸು ಮಾಡಬೇಕಿದೆ. ಸ್ಥಳೀಯರ ಪಾಲಿಗೆ ಕಾನೂನು ಸುವ್ಯವಸ್ಥೆ ಹತೋಟಿಗೆ ತರಲು ವರದಾನವಾಗಿದ್ದ ಈ ಉಪಠಾಣೆಗೆ ಕಾಯಕಲ್ಪ ನೀಡಿ ಮರುಬಳಕೆ ಮಾಡುವರೇ ಕಾದುನೋಡಬೇಕಿದೆ…?
..l

ಇತ್ತೀಚಿನ ಸುದ್ದಿ

ಜಾಹೀರಾತು