1:02 AM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಸಮಾಜಘಾತಕರಿಗೆ ಸಿಂಹಸ್ವಪ್ನವಾಗಿದ್ದ ಠಾಣೆ ಇದೀಗ ಕೇಳುವವರಿಲ್ಲ!: ಗೃಹ ಸಚಿವರೇ, ಮುಚ್ಚಿಹೋದ ಬದನವಾಳು ಉಪ ಪೊಲೀಸ್ ಠಾಣೆಗೆ ಕಾಯಕಲ್ಪ ಎಂದು?

08/07/2024, 16:19

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಿ.ಶ್ರೀನಿವಾಸ್ ಪ್ರಸಾದ್ ಹಾಗೂ ದಿ.ಧೃವನಾರಾಯಣ್ ರವರ ನಿರಂತರ ಒತ್ತಡಕ್ಕೆ ಮಣಿದ ಸರ್ಕಾರ ಸ್ಥಾಪಿಸಿದ ಬದನವಾಳು ಉಪ ಪೊಲೀಸ್ ಠಾಣೆ ಅವಸಾನದ ಅಂಚಿಗೆ ತಲುಪಿದೆ. ಪೊಲೀಸ್ ಇಲಾಖೆಯ ನಿರ್ಲಕ್ಷ್ಯಕ್ಕೆ ಒಳಗಾಗಿ ನಿರಪಯುಕ್ತವಾಗಿ ಪಾಳು ಬಿದ್ದಿದೆ. ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಿಸಿದ ಸುಸಜ್ಜಿತ ಕಟ್ಟಡ ಬಳಕೆಗೆ ಬಾರದೆ ಮೂಕ ರೋಧನೆ ಅನುಭವಿಸುತ್ತಿದೆ.
ಕಿಡಿಗೇಡಿಗಳು ಸಮಾಜ ಘಾತಕರಿಗೆ ಸಿಂಹಸ್ವಪ್ನವಾಗಿದ್ದ ಠಾಣೆ ಇದೀಗ ಕೇಳುವವರಿಲ್ಲದೆ ಅಸ್ತಿತ್ವಕ್ಕಾಗಿ ಎದುರು ನೋಡುತ್ತಿದೆ.
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಹಿಂದೆ ನಡೆದ ಮತೀಯ ಸಂಘರ್ಷ ರಾಜ್ಯದಲ್ಲಿ ಮತ್ತು ದೇಶದಲ್ಲಿ ಸಂಚಲನ ಮೂಡಿಸಿತ್ತು. ಕಿಡಿಗೇಡಿಗಳ ಅಟ್ಟಹಾಸಕ್ಕೆ ಬದನವಾಳು ಗ್ರಾಮ ನಲುಗಿತ್ತು. ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಖದೀಮರ ಹೆಡೆಮುರಿ ಕಟ್ಟುವ ಉದ್ದೇಶದಿಂದಲೇ ಇಲ್ಲೊಂದು ಉಪಠಾಣೆ ಸ್ಥಾಪನೆ ಆಗಲೇಬೇಕೆಂದು ಪಟ್ಟುಹಿಡಿದ ಶ್ರೀನಿವಾಸ್ ಪ್ರಸಾದ್ ಹಾಗೂ ಧೃವನಾರಾಯಣ್ ಸರ್ಕಾರದ ಕಣ್ಣು ತೆರೆಸಿ ಯಶಸ್ವಿಯಾಗಿ 1992-93ನೇ ಸಾಲಿನಲ್ಲಿ ಲಕ್ಷಾಂತರ ರೂ. ಖರ್ಚು ಮಾಡಿ ಠಾಣೆ ಚಾಲನೆಗೆ ಬಂತು. ಹತ್ತಾರು ವರ್ಷಗಳ ಕಾಲ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಾರ್ವಜನಿಕರ ಹಿತರಕ್ಷಣೆಗಾಗಿ ಸ್ಪಂದಿಸಿದ ಪೊಲೀಸ್ ಠಾಣೆ ಇದೀಗ ಸಾಕಷ್ಟು ಅನುಕೂಲಗಳಿದ್ದ ಸುಸಜ್ಜಿತ ಕಟ್ಟಡ ಕ್ರಮೇಣ ಅವಸಾನದ ಅಂಚಿಗೆ ತಲುಪಿದೆ. ಲಕ್ಷಾಂತರ ರೂ ವೆಚ್ಚ ಮಾಡಿದ ಕಟ್ಟಡಕ್ಕೆ ಸೂಕ್ತ ನಿರ್ವಹಣೆ ಇಲ್ಲದೆ ಸೊರಗಿದೆ. ಇಲ್ಲಿ ನಡೆಯಬೇಕಿದ್ದ ಕಾರ್ಯಚಟುವಟಿಕೆಗಳು ದೊಡ್ಡ ಕವಲಂದೆ ಪೊಲೀಸ್ ಠಾಣೆಗೆ ಶಿಫ್ಟ್ ಆಗಿದೆ. ಬದನವಾಳು ಗ್ರಾಮದಲ್ಲಿ ಮುಚ್ಚಿ ಹೋಗಿರುವ ಸುಸಜ್ಜಿತ ಕೊಠಡಿಯಲ್ಲಿ ಎರಡು ಸೆಲ್ ಗಳಿವೆ. ಪೀಠೋಪಕರಣಗಳು ಸಧ್ಯ ಗೆದ್ದಲು ಹಿಡಿದಿದೆ. ಕೇಳುವವರಿಲ್ಲದ ಕಾರಣ ಅನೈತಿಕ ಚಟುವಟಿಕೆಗಳ ತಾಣವಾಗಿದೆ ಎನ್ನಲಾಗಿದೆ. ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳಿದ್ದರೂ ಇದನ್ನ ಕಡೆಗಣಿಸಿದ್ದೇಕೆ ಎಂಬ ಪ್ರಶ್ನೆಗೆ ಉತ್ತರ ಸಿಗುತ್ತಿಲ್ಲ.


ನಂಜನಗೂಡು ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಈ ಉಪ ಪೊಲೀಸ್ ಠಾಣೆಗೆ ಜೀವ ತುಂಬಲು
ಗೃಹ ಸಚಿವರೇ ಮನಸ್ಸು ಮಾಡಬೇಕಿದೆ. ಸ್ಥಳೀಯರ ಪಾಲಿಗೆ ಕಾನೂನು ಸುವ್ಯವಸ್ಥೆ ಹತೋಟಿಗೆ ತರಲು ವರದಾನವಾಗಿದ್ದ ಈ ಉಪಠಾಣೆಗೆ ಕಾಯಕಲ್ಪ ನೀಡಿ ಮರುಬಳಕೆ ಮಾಡುವರೇ ಕಾದುನೋಡಬೇಕಿದೆ…?
..l

ಇತ್ತೀಚಿನ ಸುದ್ದಿ

ಜಾಹೀರಾತು