4:33 PM Tuesday4 - November 2025
ಬ್ರೇಕಿಂಗ್ ನ್ಯೂಸ್
40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:…

ಇತ್ತೀಚಿನ ಸುದ್ದಿ

ಸಮಾಜಮುಖಿ ಸೇವೆ: ಅಭಿನಂದನ್ ಶಿಕ್ಷಣ ಸಂಸ್ಥೆಯ ರಾಮಣ್ಣ ಹಂಪರಗುಂದಿಗೆ ಶ್ರೀಗಳಿಂದ ಮೆಚ್ಚುಗೆ

15/06/2021, 19:12

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ

Info.reporterkarnataka@gmail.com

ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ತಮ್ಮ ಜೀವನದ ಹಂಗು ತೊರೆದು ಅಭಿನಂದನ್ ಶಿಕ್ಷಣ ಸಂಸ್ಥೆ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕ ರಾಮಣ್ಣ ಹಂಪರಗುಂದಿ ಅವರು ಮಿತ್ರರೊಂದಿಗೆ ಸೇರಿಕೊಂಡು ಸಮಾಜಮುಖಿ ಕೆಲಸ ಮಾಡಿದ್ದಾರೆ. ಬಡಜನರ ಸೇವೆ ಹಾಗೂ ಪರಿಸರ ರಕ್ಷಣೆಯ ಮೂಲಕ ಅವರು ಇಂದು ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವುದು ಸಂತೋಷದ ವಿಷಯ ಎಂದು ಬೆಳಗಾಂ ರಾಮದುರ್ಗ ಬಾಗೋಜಿಕೊಪ್ಪ ಹಿರೇಮಠ್ ಸಂಸ್ಥಾನದ ಡಾ. ಶಿವಲಿಂಗ ಶಿವಾಚಾರ್ಯ ದೇವರು ಮೆಚ್ಚಿಗೆ ವ್ಯಕ್ತಪಡಿಸಿದರು.

ರಾಮಣ್ಣ ಅವರು ಕೊರೊನಾ ಮೊದಲನೆ ಅಲೆಯಲ್ಲಿಯೂ ಸಾಕಷ್ಟು ಸಹಾಯ ಮಾಡಿದ್ದು, ಎರಡನೆ ಅಲೆಯ ಸಂದರ್ಭದಲ್ಲಿ ಪ್ರತಿ ಬಡ ಕುಟುಂಬಗಳಿಗೆ ತಾಲೂಕಿನಲ್ಲಿ ತಮ್ಮದೇ ಆದ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಕಟ್ಟಿ ಸಹಾಯಕ್ಕೆ ಟೊಂಕಕಟ್ಟಿ ನಿಂತಿದ್ದಾರೆ. ಸಂಸ್ಥೆಯು ಇದೀಗ ಜಿಲ್ಲಾ ಮಟ್ಟದಲ್ಲಿ ಅಷ್ಟೇ ಅಲ್ಲ ರಾಜ್ಯಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅವರ ಸೇವೆ ಅಪಾರವಾದದ್ದು ಎಂದು ಸಾರ್ವಜನಿಕರಿಂದ ಧ್ವನಿ ಕೇಳಿಬರುತ್ತದೆ. ಇವತ್ತು ಲಾಕ್ ಡೌನ್ ಸಮಯದಲ್ಲಿ ಜನಪ್ರತಿನಿಧಿಗಳು ಮಾಡಲಾಗದಂತಹ ಕೆಲಸವನ್ನು ಒಬ್ಬ ಸಮಾಜ ಸೇವಕ ಮಾಡುತ್ತಿದ್ದಾರೆ ಎಂದರೆ ಅದು ಸಮಾಜ ಮೆಚ್ಚುವಂತ ಕೆಲಸ. ಅದು ಪುಣ್ಯದ ಕೆಲಸ ಎಂದು ಸ್ವಾಮೀಜಿ ನುಡಿದರು.

ಜನರೊಂದಿಗೆ ಮೂಕ ಪ್ರಾಣಿಗಳ ರೋಧನವನ್ನೂ ಅವರು ಅರ್ಥ ಮಾಡಿಕೊಂಡಿದ್ದಾರೆ. ಪರಿಸರದ ಬಗ್ಗೆಯೂ ಕಾಳಜಿ ಹೊಂದಿದ್ದಾರೆ. 10 ಸಾವಿರ ಸಸಿಗಳನ್ನು ನೆಡುವ ಕಾರ್ಯಕ್ರಮದ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ರವಾನಿಸುತ್ತಿದ್ದಾರೆ. ನೆಟ್ಟ ಸಸಿಗಳಿಗೆ ಬೇಲಿ ಹಾಕಿ ಅದನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ. ಇಷ್ಟೆಲ್ಲ ಸಮಾಜಮುಖಿ ಕೆಲಸ ಮಾಡುವ ರಾಮಣ್ಣನವರಿಗೆ ಒಳ್ಳೆಯದಾಗಲಿ ಎಂದು ಸ್ವಾಮೀಜಿ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು