12:51 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಸಮಾಜಮುಖಿ ಸೇವೆ: ಅಭಿನಂದನ್ ಶಿಕ್ಷಣ ಸಂಸ್ಥೆಯ ರಾಮಣ್ಣ ಹಂಪರಗುಂದಿಗೆ ಶ್ರೀಗಳಿಂದ ಮೆಚ್ಚುಗೆ

15/06/2021, 19:12

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ

Info.reporterkarnataka@gmail.com

ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ತಮ್ಮ ಜೀವನದ ಹಂಗು ತೊರೆದು ಅಭಿನಂದನ್ ಶಿಕ್ಷಣ ಸಂಸ್ಥೆ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕ ರಾಮಣ್ಣ ಹಂಪರಗುಂದಿ ಅವರು ಮಿತ್ರರೊಂದಿಗೆ ಸೇರಿಕೊಂಡು ಸಮಾಜಮುಖಿ ಕೆಲಸ ಮಾಡಿದ್ದಾರೆ. ಬಡಜನರ ಸೇವೆ ಹಾಗೂ ಪರಿಸರ ರಕ್ಷಣೆಯ ಮೂಲಕ ಅವರು ಇಂದು ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವುದು ಸಂತೋಷದ ವಿಷಯ ಎಂದು ಬೆಳಗಾಂ ರಾಮದುರ್ಗ ಬಾಗೋಜಿಕೊಪ್ಪ ಹಿರೇಮಠ್ ಸಂಸ್ಥಾನದ ಡಾ. ಶಿವಲಿಂಗ ಶಿವಾಚಾರ್ಯ ದೇವರು ಮೆಚ್ಚಿಗೆ ವ್ಯಕ್ತಪಡಿಸಿದರು.

ರಾಮಣ್ಣ ಅವರು ಕೊರೊನಾ ಮೊದಲನೆ ಅಲೆಯಲ್ಲಿಯೂ ಸಾಕಷ್ಟು ಸಹಾಯ ಮಾಡಿದ್ದು, ಎರಡನೆ ಅಲೆಯ ಸಂದರ್ಭದಲ್ಲಿ ಪ್ರತಿ ಬಡ ಕುಟುಂಬಗಳಿಗೆ ತಾಲೂಕಿನಲ್ಲಿ ತಮ್ಮದೇ ಆದ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಕಟ್ಟಿ ಸಹಾಯಕ್ಕೆ ಟೊಂಕಕಟ್ಟಿ ನಿಂತಿದ್ದಾರೆ. ಸಂಸ್ಥೆಯು ಇದೀಗ ಜಿಲ್ಲಾ ಮಟ್ಟದಲ್ಲಿ ಅಷ್ಟೇ ಅಲ್ಲ ರಾಜ್ಯಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅವರ ಸೇವೆ ಅಪಾರವಾದದ್ದು ಎಂದು ಸಾರ್ವಜನಿಕರಿಂದ ಧ್ವನಿ ಕೇಳಿಬರುತ್ತದೆ. ಇವತ್ತು ಲಾಕ್ ಡೌನ್ ಸಮಯದಲ್ಲಿ ಜನಪ್ರತಿನಿಧಿಗಳು ಮಾಡಲಾಗದಂತಹ ಕೆಲಸವನ್ನು ಒಬ್ಬ ಸಮಾಜ ಸೇವಕ ಮಾಡುತ್ತಿದ್ದಾರೆ ಎಂದರೆ ಅದು ಸಮಾಜ ಮೆಚ್ಚುವಂತ ಕೆಲಸ. ಅದು ಪುಣ್ಯದ ಕೆಲಸ ಎಂದು ಸ್ವಾಮೀಜಿ ನುಡಿದರು.

ಜನರೊಂದಿಗೆ ಮೂಕ ಪ್ರಾಣಿಗಳ ರೋಧನವನ್ನೂ ಅವರು ಅರ್ಥ ಮಾಡಿಕೊಂಡಿದ್ದಾರೆ. ಪರಿಸರದ ಬಗ್ಗೆಯೂ ಕಾಳಜಿ ಹೊಂದಿದ್ದಾರೆ. 10 ಸಾವಿರ ಸಸಿಗಳನ್ನು ನೆಡುವ ಕಾರ್ಯಕ್ರಮದ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ರವಾನಿಸುತ್ತಿದ್ದಾರೆ. ನೆಟ್ಟ ಸಸಿಗಳಿಗೆ ಬೇಲಿ ಹಾಕಿ ಅದನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ. ಇಷ್ಟೆಲ್ಲ ಸಮಾಜಮುಖಿ ಕೆಲಸ ಮಾಡುವ ರಾಮಣ್ಣನವರಿಗೆ ಒಳ್ಳೆಯದಾಗಲಿ ಎಂದು ಸ್ವಾಮೀಜಿ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು