7:20 PM Saturday14 - June 2025
ಬ್ರೇಕಿಂಗ್ ನ್ಯೂಸ್
Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ… ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ:… ಡಿಸಿಎಂ ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಲಿ: ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ…

ಇತ್ತೀಚಿನ ಸುದ್ದಿ

ಸಮಾಜಮುಖಿ ಸೇವೆ: ಅಭಿನಂದನ್ ಶಿಕ್ಷಣ ಸಂಸ್ಥೆಯ ರಾಮಣ್ಣ ಹಂಪರಗುಂದಿಗೆ ಶ್ರೀಗಳಿಂದ ಮೆಚ್ಚುಗೆ

15/06/2021, 19:12

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ

Info.reporterkarnataka@gmail.com

ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ತಮ್ಮ ಜೀವನದ ಹಂಗು ತೊರೆದು ಅಭಿನಂದನ್ ಶಿಕ್ಷಣ ಸಂಸ್ಥೆ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕ ರಾಮಣ್ಣ ಹಂಪರಗುಂದಿ ಅವರು ಮಿತ್ರರೊಂದಿಗೆ ಸೇರಿಕೊಂಡು ಸಮಾಜಮುಖಿ ಕೆಲಸ ಮಾಡಿದ್ದಾರೆ. ಬಡಜನರ ಸೇವೆ ಹಾಗೂ ಪರಿಸರ ರಕ್ಷಣೆಯ ಮೂಲಕ ಅವರು ಇಂದು ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವುದು ಸಂತೋಷದ ವಿಷಯ ಎಂದು ಬೆಳಗಾಂ ರಾಮದುರ್ಗ ಬಾಗೋಜಿಕೊಪ್ಪ ಹಿರೇಮಠ್ ಸಂಸ್ಥಾನದ ಡಾ. ಶಿವಲಿಂಗ ಶಿವಾಚಾರ್ಯ ದೇವರು ಮೆಚ್ಚಿಗೆ ವ್ಯಕ್ತಪಡಿಸಿದರು.

ರಾಮಣ್ಣ ಅವರು ಕೊರೊನಾ ಮೊದಲನೆ ಅಲೆಯಲ್ಲಿಯೂ ಸಾಕಷ್ಟು ಸಹಾಯ ಮಾಡಿದ್ದು, ಎರಡನೆ ಅಲೆಯ ಸಂದರ್ಭದಲ್ಲಿ ಪ್ರತಿ ಬಡ ಕುಟುಂಬಗಳಿಗೆ ತಾಲೂಕಿನಲ್ಲಿ ತಮ್ಮದೇ ಆದ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಕಟ್ಟಿ ಸಹಾಯಕ್ಕೆ ಟೊಂಕಕಟ್ಟಿ ನಿಂತಿದ್ದಾರೆ. ಸಂಸ್ಥೆಯು ಇದೀಗ ಜಿಲ್ಲಾ ಮಟ್ಟದಲ್ಲಿ ಅಷ್ಟೇ ಅಲ್ಲ ರಾಜ್ಯಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅವರ ಸೇವೆ ಅಪಾರವಾದದ್ದು ಎಂದು ಸಾರ್ವಜನಿಕರಿಂದ ಧ್ವನಿ ಕೇಳಿಬರುತ್ತದೆ. ಇವತ್ತು ಲಾಕ್ ಡೌನ್ ಸಮಯದಲ್ಲಿ ಜನಪ್ರತಿನಿಧಿಗಳು ಮಾಡಲಾಗದಂತಹ ಕೆಲಸವನ್ನು ಒಬ್ಬ ಸಮಾಜ ಸೇವಕ ಮಾಡುತ್ತಿದ್ದಾರೆ ಎಂದರೆ ಅದು ಸಮಾಜ ಮೆಚ್ಚುವಂತ ಕೆಲಸ. ಅದು ಪುಣ್ಯದ ಕೆಲಸ ಎಂದು ಸ್ವಾಮೀಜಿ ನುಡಿದರು.

ಜನರೊಂದಿಗೆ ಮೂಕ ಪ್ರಾಣಿಗಳ ರೋಧನವನ್ನೂ ಅವರು ಅರ್ಥ ಮಾಡಿಕೊಂಡಿದ್ದಾರೆ. ಪರಿಸರದ ಬಗ್ಗೆಯೂ ಕಾಳಜಿ ಹೊಂದಿದ್ದಾರೆ. 10 ಸಾವಿರ ಸಸಿಗಳನ್ನು ನೆಡುವ ಕಾರ್ಯಕ್ರಮದ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ರವಾನಿಸುತ್ತಿದ್ದಾರೆ. ನೆಟ್ಟ ಸಸಿಗಳಿಗೆ ಬೇಲಿ ಹಾಕಿ ಅದನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ. ಇಷ್ಟೆಲ್ಲ ಸಮಾಜಮುಖಿ ಕೆಲಸ ಮಾಡುವ ರಾಮಣ್ಣನವರಿಗೆ ಒಳ್ಳೆಯದಾಗಲಿ ಎಂದು ಸ್ವಾಮೀಜಿ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು