5:30 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಸಮಾಜಮುಖಿ ಸೇವೆ: ಅಭಿನಂದನ್ ಶಿಕ್ಷಣ ಸಂಸ್ಥೆಯ ರಾಮಣ್ಣ ಹಂಪರಗುಂದಿಗೆ ಶ್ರೀಗಳಿಂದ ಮೆಚ್ಚುಗೆ

15/06/2021, 19:12

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ

Info.reporterkarnataka@gmail.com

ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ತಮ್ಮ ಜೀವನದ ಹಂಗು ತೊರೆದು ಅಭಿನಂದನ್ ಶಿಕ್ಷಣ ಸಂಸ್ಥೆ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕ ರಾಮಣ್ಣ ಹಂಪರಗುಂದಿ ಅವರು ಮಿತ್ರರೊಂದಿಗೆ ಸೇರಿಕೊಂಡು ಸಮಾಜಮುಖಿ ಕೆಲಸ ಮಾಡಿದ್ದಾರೆ. ಬಡಜನರ ಸೇವೆ ಹಾಗೂ ಪರಿಸರ ರಕ್ಷಣೆಯ ಮೂಲಕ ಅವರು ಇಂದು ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವುದು ಸಂತೋಷದ ವಿಷಯ ಎಂದು ಬೆಳಗಾಂ ರಾಮದುರ್ಗ ಬಾಗೋಜಿಕೊಪ್ಪ ಹಿರೇಮಠ್ ಸಂಸ್ಥಾನದ ಡಾ. ಶಿವಲಿಂಗ ಶಿವಾಚಾರ್ಯ ದೇವರು ಮೆಚ್ಚಿಗೆ ವ್ಯಕ್ತಪಡಿಸಿದರು.

ರಾಮಣ್ಣ ಅವರು ಕೊರೊನಾ ಮೊದಲನೆ ಅಲೆಯಲ್ಲಿಯೂ ಸಾಕಷ್ಟು ಸಹಾಯ ಮಾಡಿದ್ದು, ಎರಡನೆ ಅಲೆಯ ಸಂದರ್ಭದಲ್ಲಿ ಪ್ರತಿ ಬಡ ಕುಟುಂಬಗಳಿಗೆ ತಾಲೂಕಿನಲ್ಲಿ ತಮ್ಮದೇ ಆದ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಕಟ್ಟಿ ಸಹಾಯಕ್ಕೆ ಟೊಂಕಕಟ್ಟಿ ನಿಂತಿದ್ದಾರೆ. ಸಂಸ್ಥೆಯು ಇದೀಗ ಜಿಲ್ಲಾ ಮಟ್ಟದಲ್ಲಿ ಅಷ್ಟೇ ಅಲ್ಲ ರಾಜ್ಯಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅವರ ಸೇವೆ ಅಪಾರವಾದದ್ದು ಎಂದು ಸಾರ್ವಜನಿಕರಿಂದ ಧ್ವನಿ ಕೇಳಿಬರುತ್ತದೆ. ಇವತ್ತು ಲಾಕ್ ಡೌನ್ ಸಮಯದಲ್ಲಿ ಜನಪ್ರತಿನಿಧಿಗಳು ಮಾಡಲಾಗದಂತಹ ಕೆಲಸವನ್ನು ಒಬ್ಬ ಸಮಾಜ ಸೇವಕ ಮಾಡುತ್ತಿದ್ದಾರೆ ಎಂದರೆ ಅದು ಸಮಾಜ ಮೆಚ್ಚುವಂತ ಕೆಲಸ. ಅದು ಪುಣ್ಯದ ಕೆಲಸ ಎಂದು ಸ್ವಾಮೀಜಿ ನುಡಿದರು.

ಜನರೊಂದಿಗೆ ಮೂಕ ಪ್ರಾಣಿಗಳ ರೋಧನವನ್ನೂ ಅವರು ಅರ್ಥ ಮಾಡಿಕೊಂಡಿದ್ದಾರೆ. ಪರಿಸರದ ಬಗ್ಗೆಯೂ ಕಾಳಜಿ ಹೊಂದಿದ್ದಾರೆ. 10 ಸಾವಿರ ಸಸಿಗಳನ್ನು ನೆಡುವ ಕಾರ್ಯಕ್ರಮದ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ರವಾನಿಸುತ್ತಿದ್ದಾರೆ. ನೆಟ್ಟ ಸಸಿಗಳಿಗೆ ಬೇಲಿ ಹಾಕಿ ಅದನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ. ಇಷ್ಟೆಲ್ಲ ಸಮಾಜಮುಖಿ ಕೆಲಸ ಮಾಡುವ ರಾಮಣ್ಣನವರಿಗೆ ಒಳ್ಳೆಯದಾಗಲಿ ಎಂದು ಸ್ವಾಮೀಜಿ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು