4:48 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಸಮಾಜಮುಖಿ ಸೇವೆ: ಅಭಿನಂದನ್ ಶಿಕ್ಷಣ ಸಂಸ್ಥೆಯ ರಾಮಣ್ಣ ಹಂಪರಗುಂದಿಗೆ ಶ್ರೀಗಳಿಂದ ಮೆಚ್ಚುಗೆ

15/06/2021, 19:12

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ

Info.reporterkarnataka@gmail.com

ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ತಮ್ಮ ಜೀವನದ ಹಂಗು ತೊರೆದು ಅಭಿನಂದನ್ ಶಿಕ್ಷಣ ಸಂಸ್ಥೆ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕ ರಾಮಣ್ಣ ಹಂಪರಗುಂದಿ ಅವರು ಮಿತ್ರರೊಂದಿಗೆ ಸೇರಿಕೊಂಡು ಸಮಾಜಮುಖಿ ಕೆಲಸ ಮಾಡಿದ್ದಾರೆ. ಬಡಜನರ ಸೇವೆ ಹಾಗೂ ಪರಿಸರ ರಕ್ಷಣೆಯ ಮೂಲಕ ಅವರು ಇಂದು ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವುದು ಸಂತೋಷದ ವಿಷಯ ಎಂದು ಬೆಳಗಾಂ ರಾಮದುರ್ಗ ಬಾಗೋಜಿಕೊಪ್ಪ ಹಿರೇಮಠ್ ಸಂಸ್ಥಾನದ ಡಾ. ಶಿವಲಿಂಗ ಶಿವಾಚಾರ್ಯ ದೇವರು ಮೆಚ್ಚಿಗೆ ವ್ಯಕ್ತಪಡಿಸಿದರು.

ರಾಮಣ್ಣ ಅವರು ಕೊರೊನಾ ಮೊದಲನೆ ಅಲೆಯಲ್ಲಿಯೂ ಸಾಕಷ್ಟು ಸಹಾಯ ಮಾಡಿದ್ದು, ಎರಡನೆ ಅಲೆಯ ಸಂದರ್ಭದಲ್ಲಿ ಪ್ರತಿ ಬಡ ಕುಟುಂಬಗಳಿಗೆ ತಾಲೂಕಿನಲ್ಲಿ ತಮ್ಮದೇ ಆದ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಕಟ್ಟಿ ಸಹಾಯಕ್ಕೆ ಟೊಂಕಕಟ್ಟಿ ನಿಂತಿದ್ದಾರೆ. ಸಂಸ್ಥೆಯು ಇದೀಗ ಜಿಲ್ಲಾ ಮಟ್ಟದಲ್ಲಿ ಅಷ್ಟೇ ಅಲ್ಲ ರಾಜ್ಯಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅವರ ಸೇವೆ ಅಪಾರವಾದದ್ದು ಎಂದು ಸಾರ್ವಜನಿಕರಿಂದ ಧ್ವನಿ ಕೇಳಿಬರುತ್ತದೆ. ಇವತ್ತು ಲಾಕ್ ಡೌನ್ ಸಮಯದಲ್ಲಿ ಜನಪ್ರತಿನಿಧಿಗಳು ಮಾಡಲಾಗದಂತಹ ಕೆಲಸವನ್ನು ಒಬ್ಬ ಸಮಾಜ ಸೇವಕ ಮಾಡುತ್ತಿದ್ದಾರೆ ಎಂದರೆ ಅದು ಸಮಾಜ ಮೆಚ್ಚುವಂತ ಕೆಲಸ. ಅದು ಪುಣ್ಯದ ಕೆಲಸ ಎಂದು ಸ್ವಾಮೀಜಿ ನುಡಿದರು.

ಜನರೊಂದಿಗೆ ಮೂಕ ಪ್ರಾಣಿಗಳ ರೋಧನವನ್ನೂ ಅವರು ಅರ್ಥ ಮಾಡಿಕೊಂಡಿದ್ದಾರೆ. ಪರಿಸರದ ಬಗ್ಗೆಯೂ ಕಾಳಜಿ ಹೊಂದಿದ್ದಾರೆ. 10 ಸಾವಿರ ಸಸಿಗಳನ್ನು ನೆಡುವ ಕಾರ್ಯಕ್ರಮದ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ರವಾನಿಸುತ್ತಿದ್ದಾರೆ. ನೆಟ್ಟ ಸಸಿಗಳಿಗೆ ಬೇಲಿ ಹಾಕಿ ಅದನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ. ಇಷ್ಟೆಲ್ಲ ಸಮಾಜಮುಖಿ ಕೆಲಸ ಮಾಡುವ ರಾಮಣ್ಣನವರಿಗೆ ಒಳ್ಳೆಯದಾಗಲಿ ಎಂದು ಸ್ವಾಮೀಜಿ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು