11:29 AM Thursday3 - July 2025
ಬ್ರೇಕಿಂಗ್ ನ್ಯೂಸ್
ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ…

ಇತ್ತೀಚಿನ ಸುದ್ದಿ

ಸಮಾಜವೇ ತಲೆತಗ್ಗಿಸುವಂತೆ ಮಾಡಿದ ಕೃತ್ಯ : ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ದುರುಳರು

13/09/2021, 14:58

ತೆಲಂಗಾಣ

ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಸಾಯಿದ ಬಾದ್‌ನ ಸಿಂಗರೇನಿ ಕಾಲನಿಯಲ್ಲಿ ನಡೆದಿದೆ.

ಪುಟ್ಟ ಮಗುವಿನ ಮುಗ್ಧತೆಗೂ ಕರಗದ ದುರುಳರ ವಿಕೃತ ಮನಸ್ಸು ಈ ಕೃತ್ಯವನ್ನು ಗೈದಿದೆ. ಭಾರತದಲ್ಲಿ ಸತತವಾಗಿ ಈ ರೀತಿಯ ಪ್ರಕರಣಗಳು ಪ್ರತಿದಿನವೂ ಕೇಳಿ ಬರುತ್ತಿದ್ದು, ಜನರು ಹಾಗೂ ಆಡಳಿತ ವರ್ಗದಲ್ಲಿರುವ ದುರುಳರು ದಿವ್ಯ ಮೌನವನ್ನು ವಹಿಸಿದ್ದಾರೆ.

ಎಳೆಯ ಮಗುವೊ ಇಳಿಯ ಪ್ರಾಯದ ಹೆಂಗಸೊ ಎಂದು ನೋಡದೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ದೇಶದ ಆಂತರಿಕ ಸುವ್ಯವಸ್ಥೆಯನ್ನೆ ಪ್ರಶ್ನೆ ಮಾಡುತ್ತಿದೆ.

ದೇಶದ ಯಾವುದೇ ಮುಖ್ಯವಾಹಿನಿಯಲ್ಲಿರುವ ಮಾಧ್ಯಮಗಳಲ್ಲಿ ಈ ಪ್ರಕರಣ ಸುದ್ದಿಯಾಗದೆ ಇರುವುದರಿಂದ ಜನರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು