ಇತ್ತೀಚಿನ ಸುದ್ದಿ
ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರ ಅಶ್ಲೀಲ ಚಿತ್ರಣ: ಆರೋಪಿಯ ಬಂಧನ
04/08/2023, 12:52

ಮಂಗಳೂರು(reporterkarnataka.com): ಹಿಂದೂ ದೇವರ ಬಗ್ಗೆ ಆಶ್ಲೀಲವಾಗಿ ಬರೆದು ಕಮೆಂಟ್ ಮಾಡಿದ ಪ್ರಕರಣದ ಆರೋಪಿಯ ಬಂಧಿಸಲಾಗಿದೆ.
ಇನ್ ಸ್ಟಾಗ್ರಾಂನಲ್ಲಿ ಹಿಂದೂ ದೇವರ ಬಗ್ಗೆ ಆಶ್ಲೀಲವಾಗಿ ಬರೆದು ಕಮೆಂಟ್ ಮಾಡಿದ ಬಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ. ಪ್ರಕರಣದ ಆರೋಪಿಯಾದ ಬಿಕರ್ಣಕಟ್ಟೆಯ
ಮೊಹಮ್ಮದ್ ಸಲ್ಮಾನ್ (22)ಎಂಬಾತನನ್ನು ದಸ್ತಗಿರಿ ಮಾಡಿ ಮಂಗಳೂರಿನ 7ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಪ್ರಕರಣದಲ್ಲಿನ ಆರೋಪಿ ಪತ್ತೆ ಕಾರ್ಯದಲ್ಲಿ ಮಂಗಳೂರು ಪೊಲೀಸ್ ಆಯುಕ್ತರು ಕುಲದೀಪ್ ಕುಮಾರ್ ಆರ್. ಜೈನ್ ರವರ ಮಾರ್ಗದರ್ಶನದಂತೆ, ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಸತೀಶ್ ಎಂ. ಪಿ.
ನೇತೃತ್ವದಲ್ಲಿ, ಸೆನ್ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿದ್ದರು,