4:06 PM Sunday12 - April 2026
ಬ್ರೇಕಿಂಗ್ ನ್ಯೂಸ್
ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ…

ಇತ್ತೀಚಿನ ಸುದ್ದಿ

ಸಾಮಾಜಿಕ ಜಾಲತಾಣದಿಂದ ಮಾಹಿತಿ:ಸಂಪೂರ್ಣ ಹದ ಗೆಟ್ಟ ರಸ್ತೆ ದುರಸ್ತಿಗೆ ಸಿಡ್ನಿಯಿಂದ ಪಿಡಬ್ಲ್ಯುಡಿ ಅಧಿಕಾರಿಗಳಿಗೆ ಸ್ಪೀಕರ್ ಖಾದರ್ ಕರೆ

09/11/2024, 16:24

ಮಂಗಳೂರು(reporterkarnataka.com):ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಕಾಮನ್ ವೆಲ್ತ್ ಪಾರ್ಲೆಮೆಂಟರಿ ಅಸೋಸಿಯೇಷನ್ ಸಮಾವೇಶದಲ್ಲಿರುವ ಸ್ಪೀಕರ್ ಯು.ಟಿ ಖಾದರ್ ಕ್ಷೇತ್ರದ ರಸ್ತೆ ಸಂಪೂರ್ಣ ಹದಗೆಟ್ಟಿರುವ ವಿಚಾರ ಸಾಮಾಜಿಕ ಜಾಲತಾಣದ ಮುಖಾಂತರ ಮಾಹಿತಿ ಸಿಕ್ಕ ತಕ್ಷಣ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಇಂಜಿನಿಯರ್ ಗಳಿಗೆ ತಕ್ಷಣ ರಸ್ತೆ ದುರಸ್ತಿ ಸರಿಪಡಿಸಲು ಸೂಚನೆ ನೀಡಿದ್ದಾರೆ.
ಮಂಗಳೂರು ವಿಧಾನ‌ಸಭಾ ಕ್ಷೇತ್ರದ ತೊಕ್ಕೊಟ್ಟು-ಕುತ್ತಾರು-ಮುಡಿಪು,ಮಂಗಳೂರು ವಿಧಾನಸಭಾ ಕ್ಷೇತ್ರದ ಗಡಿ ಪ್ರದೇಶವಾದ ಮುದುಂಗಾರು ಕಟ್ಟೆ ತನಕ‌ ಸುಮಾರು 30 ಕೋಟಿ ಅನುದಾನ ಬಿಡುಗಡೆಯಾಗಿದ್ದು ಟೆಂಡರ್ ಕೂಡ ಮುಗಿದಿದೆ.
ಮಳೆಗಾಲದಲ್ಲಿ ಡಾಂಬಾರು ಘಟಕ ಸ್ಥಗಿತವಾದ ಕಾರಣ ಮಳೆಗಾಲ‌ ಮುಗಿದ ತಕ್ಷಣ ಕೆಲಸ ಪ್ರಾರಂಭಿಸಲಾಗುವುದು.
ಈಗಾಗಲೇ ತೊಕ್ಕೊಟ್ಟು ಕುತ್ತಾರು ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ಕೆಲಸ ಪ್ರಾರಂಭವಾಗಿದೆ, ಅಲ್ಲಿಯವರೆಗೆ ತಾತ್ಕಾಲಿಕ ದುರಸ್ಥಿ ಮಾಡಲು ತಕ್ಷಣ ಸೂಚಿಸಲಾಗಿದೆ.
ಜಿಲ್ಲೆಯ ಎಲ್ಲಾ ಕ್ಷೇತ್ರದ ಬಹುತೇಕ ರಸ್ತೆಗಳು ಮಳೆಗಾಲದಲ್ಲಿ ಹದಗೆಟ್ಟಿದ್ದರು ಮಂಗಳೂರು ವಿಧಾನ ಸಭಾ ಕ್ಷೇತ್ರದ ತೊಕ್ಕೊಟ್ಟು ಕುತ್ತಾರು ರಸ್ತೆಯ ಬಗ್ಗೆ ಕಾಳಜಿ ವಹಿಸಿ ಸಾಮಾಜಿಕ ಜಾಲತಾಣದಲ್ಲಿ‌ ಮಾಹಿತಿ ನೀಡಿದವರಿಗೆ ಕ್ಷೇತ್ರದ ಶಾಸಕರಾಗಿ ಸ್ಪೀಕರ್ ಯು.ಟಿ ಖಾದರ್ ಕೃತಜ್ಞತೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು