2:08 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸಾಮಾಜಿಕ ಜಾಲತಾಣದಿಂದ ಮಾಹಿತಿ:ಸಂಪೂರ್ಣ ಹದ ಗೆಟ್ಟ ರಸ್ತೆ ದುರಸ್ತಿಗೆ ಸಿಡ್ನಿಯಿಂದ ಪಿಡಬ್ಲ್ಯುಡಿ ಅಧಿಕಾರಿಗಳಿಗೆ ಸ್ಪೀಕರ್ ಖಾದರ್ ಕರೆ

09/11/2024, 16:24

ಮಂಗಳೂರು(reporterkarnataka.com):ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಕಾಮನ್ ವೆಲ್ತ್ ಪಾರ್ಲೆಮೆಂಟರಿ ಅಸೋಸಿಯೇಷನ್ ಸಮಾವೇಶದಲ್ಲಿರುವ ಸ್ಪೀಕರ್ ಯು.ಟಿ ಖಾದರ್ ಕ್ಷೇತ್ರದ ರಸ್ತೆ ಸಂಪೂರ್ಣ ಹದಗೆಟ್ಟಿರುವ ವಿಚಾರ ಸಾಮಾಜಿಕ ಜಾಲತಾಣದ ಮುಖಾಂತರ ಮಾಹಿತಿ ಸಿಕ್ಕ ತಕ್ಷಣ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಇಂಜಿನಿಯರ್ ಗಳಿಗೆ ತಕ್ಷಣ ರಸ್ತೆ ದುರಸ್ತಿ ಸರಿಪಡಿಸಲು ಸೂಚನೆ ನೀಡಿದ್ದಾರೆ.
ಮಂಗಳೂರು ವಿಧಾನ‌ಸಭಾ ಕ್ಷೇತ್ರದ ತೊಕ್ಕೊಟ್ಟು-ಕುತ್ತಾರು-ಮುಡಿಪು,ಮಂಗಳೂರು ವಿಧಾನಸಭಾ ಕ್ಷೇತ್ರದ ಗಡಿ ಪ್ರದೇಶವಾದ ಮುದುಂಗಾರು ಕಟ್ಟೆ ತನಕ‌ ಸುಮಾರು 30 ಕೋಟಿ ಅನುದಾನ ಬಿಡುಗಡೆಯಾಗಿದ್ದು ಟೆಂಡರ್ ಕೂಡ ಮುಗಿದಿದೆ.
ಮಳೆಗಾಲದಲ್ಲಿ ಡಾಂಬಾರು ಘಟಕ ಸ್ಥಗಿತವಾದ ಕಾರಣ ಮಳೆಗಾಲ‌ ಮುಗಿದ ತಕ್ಷಣ ಕೆಲಸ ಪ್ರಾರಂಭಿಸಲಾಗುವುದು.
ಈಗಾಗಲೇ ತೊಕ್ಕೊಟ್ಟು ಕುತ್ತಾರು ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ಕೆಲಸ ಪ್ರಾರಂಭವಾಗಿದೆ, ಅಲ್ಲಿಯವರೆಗೆ ತಾತ್ಕಾಲಿಕ ದುರಸ್ಥಿ ಮಾಡಲು ತಕ್ಷಣ ಸೂಚಿಸಲಾಗಿದೆ.
ಜಿಲ್ಲೆಯ ಎಲ್ಲಾ ಕ್ಷೇತ್ರದ ಬಹುತೇಕ ರಸ್ತೆಗಳು ಮಳೆಗಾಲದಲ್ಲಿ ಹದಗೆಟ್ಟಿದ್ದರು ಮಂಗಳೂರು ವಿಧಾನ ಸಭಾ ಕ್ಷೇತ್ರದ ತೊಕ್ಕೊಟ್ಟು ಕುತ್ತಾರು ರಸ್ತೆಯ ಬಗ್ಗೆ ಕಾಳಜಿ ವಹಿಸಿ ಸಾಮಾಜಿಕ ಜಾಲತಾಣದಲ್ಲಿ‌ ಮಾಹಿತಿ ನೀಡಿದವರಿಗೆ ಕ್ಷೇತ್ರದ ಶಾಸಕರಾಗಿ ಸ್ಪೀಕರ್ ಯು.ಟಿ ಖಾದರ್ ಕೃತಜ್ಞತೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು