11:27 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ…

ಇತ್ತೀಚಿನ ಸುದ್ದಿ

ಸಾಮಾಜಿಕ ಜಾಲತಾಣದಿಂದ ಮಾಹಿತಿ:ಸಂಪೂರ್ಣ ಹದ ಗೆಟ್ಟ ರಸ್ತೆ ದುರಸ್ತಿಗೆ ಸಿಡ್ನಿಯಿಂದ ಪಿಡಬ್ಲ್ಯುಡಿ ಅಧಿಕಾರಿಗಳಿಗೆ ಸ್ಪೀಕರ್ ಖಾದರ್ ಕರೆ

09/11/2024, 16:24

ಮಂಗಳೂರು(reporterkarnataka.com):ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಕಾಮನ್ ವೆಲ್ತ್ ಪಾರ್ಲೆಮೆಂಟರಿ ಅಸೋಸಿಯೇಷನ್ ಸಮಾವೇಶದಲ್ಲಿರುವ ಸ್ಪೀಕರ್ ಯು.ಟಿ ಖಾದರ್ ಕ್ಷೇತ್ರದ ರಸ್ತೆ ಸಂಪೂರ್ಣ ಹದಗೆಟ್ಟಿರುವ ವಿಚಾರ ಸಾಮಾಜಿಕ ಜಾಲತಾಣದ ಮುಖಾಂತರ ಮಾಹಿತಿ ಸಿಕ್ಕ ತಕ್ಷಣ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಇಂಜಿನಿಯರ್ ಗಳಿಗೆ ತಕ್ಷಣ ರಸ್ತೆ ದುರಸ್ತಿ ಸರಿಪಡಿಸಲು ಸೂಚನೆ ನೀಡಿದ್ದಾರೆ.
ಮಂಗಳೂರು ವಿಧಾನ‌ಸಭಾ ಕ್ಷೇತ್ರದ ತೊಕ್ಕೊಟ್ಟು-ಕುತ್ತಾರು-ಮುಡಿಪು,ಮಂಗಳೂರು ವಿಧಾನಸಭಾ ಕ್ಷೇತ್ರದ ಗಡಿ ಪ್ರದೇಶವಾದ ಮುದುಂಗಾರು ಕಟ್ಟೆ ತನಕ‌ ಸುಮಾರು 30 ಕೋಟಿ ಅನುದಾನ ಬಿಡುಗಡೆಯಾಗಿದ್ದು ಟೆಂಡರ್ ಕೂಡ ಮುಗಿದಿದೆ.
ಮಳೆಗಾಲದಲ್ಲಿ ಡಾಂಬಾರು ಘಟಕ ಸ್ಥಗಿತವಾದ ಕಾರಣ ಮಳೆಗಾಲ‌ ಮುಗಿದ ತಕ್ಷಣ ಕೆಲಸ ಪ್ರಾರಂಭಿಸಲಾಗುವುದು.
ಈಗಾಗಲೇ ತೊಕ್ಕೊಟ್ಟು ಕುತ್ತಾರು ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ಕೆಲಸ ಪ್ರಾರಂಭವಾಗಿದೆ, ಅಲ್ಲಿಯವರೆಗೆ ತಾತ್ಕಾಲಿಕ ದುರಸ್ಥಿ ಮಾಡಲು ತಕ್ಷಣ ಸೂಚಿಸಲಾಗಿದೆ.
ಜಿಲ್ಲೆಯ ಎಲ್ಲಾ ಕ್ಷೇತ್ರದ ಬಹುತೇಕ ರಸ್ತೆಗಳು ಮಳೆಗಾಲದಲ್ಲಿ ಹದಗೆಟ್ಟಿದ್ದರು ಮಂಗಳೂರು ವಿಧಾನ ಸಭಾ ಕ್ಷೇತ್ರದ ತೊಕ್ಕೊಟ್ಟು ಕುತ್ತಾರು ರಸ್ತೆಯ ಬಗ್ಗೆ ಕಾಳಜಿ ವಹಿಸಿ ಸಾಮಾಜಿಕ ಜಾಲತಾಣದಲ್ಲಿ‌ ಮಾಹಿತಿ ನೀಡಿದವರಿಗೆ ಕ್ಷೇತ್ರದ ಶಾಸಕರಾಗಿ ಸ್ಪೀಕರ್ ಯು.ಟಿ ಖಾದರ್ ಕೃತಜ್ಞತೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು