6:23 PM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಸಾಮಾಜಿಕ ಜಾಲತಾಣದಿಂದ ಮಾಹಿತಿ:ಸಂಪೂರ್ಣ ಹದ ಗೆಟ್ಟ ರಸ್ತೆ ದುರಸ್ತಿಗೆ ಸಿಡ್ನಿಯಿಂದ ಪಿಡಬ್ಲ್ಯುಡಿ ಅಧಿಕಾರಿಗಳಿಗೆ ಸ್ಪೀಕರ್ ಖಾದರ್ ಕರೆ

09/11/2024, 16:24

ಮಂಗಳೂರು(reporterkarnataka.com):ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಕಾಮನ್ ವೆಲ್ತ್ ಪಾರ್ಲೆಮೆಂಟರಿ ಅಸೋಸಿಯೇಷನ್ ಸಮಾವೇಶದಲ್ಲಿರುವ ಸ್ಪೀಕರ್ ಯು.ಟಿ ಖಾದರ್ ಕ್ಷೇತ್ರದ ರಸ್ತೆ ಸಂಪೂರ್ಣ ಹದಗೆಟ್ಟಿರುವ ವಿಚಾರ ಸಾಮಾಜಿಕ ಜಾಲತಾಣದ ಮುಖಾಂತರ ಮಾಹಿತಿ ಸಿಕ್ಕ ತಕ್ಷಣ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಇಂಜಿನಿಯರ್ ಗಳಿಗೆ ತಕ್ಷಣ ರಸ್ತೆ ದುರಸ್ತಿ ಸರಿಪಡಿಸಲು ಸೂಚನೆ ನೀಡಿದ್ದಾರೆ.
ಮಂಗಳೂರು ವಿಧಾನ‌ಸಭಾ ಕ್ಷೇತ್ರದ ತೊಕ್ಕೊಟ್ಟು-ಕುತ್ತಾರು-ಮುಡಿಪು,ಮಂಗಳೂರು ವಿಧಾನಸಭಾ ಕ್ಷೇತ್ರದ ಗಡಿ ಪ್ರದೇಶವಾದ ಮುದುಂಗಾರು ಕಟ್ಟೆ ತನಕ‌ ಸುಮಾರು 30 ಕೋಟಿ ಅನುದಾನ ಬಿಡುಗಡೆಯಾಗಿದ್ದು ಟೆಂಡರ್ ಕೂಡ ಮುಗಿದಿದೆ.
ಮಳೆಗಾಲದಲ್ಲಿ ಡಾಂಬಾರು ಘಟಕ ಸ್ಥಗಿತವಾದ ಕಾರಣ ಮಳೆಗಾಲ‌ ಮುಗಿದ ತಕ್ಷಣ ಕೆಲಸ ಪ್ರಾರಂಭಿಸಲಾಗುವುದು.
ಈಗಾಗಲೇ ತೊಕ್ಕೊಟ್ಟು ಕುತ್ತಾರು ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ಕೆಲಸ ಪ್ರಾರಂಭವಾಗಿದೆ, ಅಲ್ಲಿಯವರೆಗೆ ತಾತ್ಕಾಲಿಕ ದುರಸ್ಥಿ ಮಾಡಲು ತಕ್ಷಣ ಸೂಚಿಸಲಾಗಿದೆ.
ಜಿಲ್ಲೆಯ ಎಲ್ಲಾ ಕ್ಷೇತ್ರದ ಬಹುತೇಕ ರಸ್ತೆಗಳು ಮಳೆಗಾಲದಲ್ಲಿ ಹದಗೆಟ್ಟಿದ್ದರು ಮಂಗಳೂರು ವಿಧಾನ ಸಭಾ ಕ್ಷೇತ್ರದ ತೊಕ್ಕೊಟ್ಟು ಕುತ್ತಾರು ರಸ್ತೆಯ ಬಗ್ಗೆ ಕಾಳಜಿ ವಹಿಸಿ ಸಾಮಾಜಿಕ ಜಾಲತಾಣದಲ್ಲಿ‌ ಮಾಹಿತಿ ನೀಡಿದವರಿಗೆ ಕ್ಷೇತ್ರದ ಶಾಸಕರಾಗಿ ಸ್ಪೀಕರ್ ಯು.ಟಿ ಖಾದರ್ ಕೃತಜ್ಞತೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು