2:00 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಸಾಮಾಜಿಕ ಜಾಲತಾಣದಿಂದ ಮಾಹಿತಿ:ಸಂಪೂರ್ಣ ಹದ ಗೆಟ್ಟ ರಸ್ತೆ ದುರಸ್ತಿಗೆ ಸಿಡ್ನಿಯಿಂದ ಪಿಡಬ್ಲ್ಯುಡಿ ಅಧಿಕಾರಿಗಳಿಗೆ ಸ್ಪೀಕರ್ ಖಾದರ್ ಕರೆ

09/11/2024, 16:24

ಮಂಗಳೂರು(reporterkarnataka.com):ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಕಾಮನ್ ವೆಲ್ತ್ ಪಾರ್ಲೆಮೆಂಟರಿ ಅಸೋಸಿಯೇಷನ್ ಸಮಾವೇಶದಲ್ಲಿರುವ ಸ್ಪೀಕರ್ ಯು.ಟಿ ಖಾದರ್ ಕ್ಷೇತ್ರದ ರಸ್ತೆ ಸಂಪೂರ್ಣ ಹದಗೆಟ್ಟಿರುವ ವಿಚಾರ ಸಾಮಾಜಿಕ ಜಾಲತಾಣದ ಮುಖಾಂತರ ಮಾಹಿತಿ ಸಿಕ್ಕ ತಕ್ಷಣ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಇಂಜಿನಿಯರ್ ಗಳಿಗೆ ತಕ್ಷಣ ರಸ್ತೆ ದುರಸ್ತಿ ಸರಿಪಡಿಸಲು ಸೂಚನೆ ನೀಡಿದ್ದಾರೆ.
ಮಂಗಳೂರು ವಿಧಾನ‌ಸಭಾ ಕ್ಷೇತ್ರದ ತೊಕ್ಕೊಟ್ಟು-ಕುತ್ತಾರು-ಮುಡಿಪು,ಮಂಗಳೂರು ವಿಧಾನಸಭಾ ಕ್ಷೇತ್ರದ ಗಡಿ ಪ್ರದೇಶವಾದ ಮುದುಂಗಾರು ಕಟ್ಟೆ ತನಕ‌ ಸುಮಾರು 30 ಕೋಟಿ ಅನುದಾನ ಬಿಡುಗಡೆಯಾಗಿದ್ದು ಟೆಂಡರ್ ಕೂಡ ಮುಗಿದಿದೆ.
ಮಳೆಗಾಲದಲ್ಲಿ ಡಾಂಬಾರು ಘಟಕ ಸ್ಥಗಿತವಾದ ಕಾರಣ ಮಳೆಗಾಲ‌ ಮುಗಿದ ತಕ್ಷಣ ಕೆಲಸ ಪ್ರಾರಂಭಿಸಲಾಗುವುದು.
ಈಗಾಗಲೇ ತೊಕ್ಕೊಟ್ಟು ಕುತ್ತಾರು ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ಕೆಲಸ ಪ್ರಾರಂಭವಾಗಿದೆ, ಅಲ್ಲಿಯವರೆಗೆ ತಾತ್ಕಾಲಿಕ ದುರಸ್ಥಿ ಮಾಡಲು ತಕ್ಷಣ ಸೂಚಿಸಲಾಗಿದೆ.
ಜಿಲ್ಲೆಯ ಎಲ್ಲಾ ಕ್ಷೇತ್ರದ ಬಹುತೇಕ ರಸ್ತೆಗಳು ಮಳೆಗಾಲದಲ್ಲಿ ಹದಗೆಟ್ಟಿದ್ದರು ಮಂಗಳೂರು ವಿಧಾನ ಸಭಾ ಕ್ಷೇತ್ರದ ತೊಕ್ಕೊಟ್ಟು ಕುತ್ತಾರು ರಸ್ತೆಯ ಬಗ್ಗೆ ಕಾಳಜಿ ವಹಿಸಿ ಸಾಮಾಜಿಕ ಜಾಲತಾಣದಲ್ಲಿ‌ ಮಾಹಿತಿ ನೀಡಿದವರಿಗೆ ಕ್ಷೇತ್ರದ ಶಾಸಕರಾಗಿ ಸ್ಪೀಕರ್ ಯು.ಟಿ ಖಾದರ್ ಕೃತಜ್ಞತೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು