12:40 AM Saturday22 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ಸಾಮಾಜಿಕ ಜಾಲತಾಣದಿಂದ ಮಾಹಿತಿ:ಸಂಪೂರ್ಣ ಹದ ಗೆಟ್ಟ ರಸ್ತೆ ದುರಸ್ತಿಗೆ ಸಿಡ್ನಿಯಿಂದ ಪಿಡಬ್ಲ್ಯುಡಿ ಅಧಿಕಾರಿಗಳಿಗೆ ಸ್ಪೀಕರ್ ಖಾದರ್ ಕರೆ

09/11/2024, 16:24

ಮಂಗಳೂರು(reporterkarnataka.com):ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಕಾಮನ್ ವೆಲ್ತ್ ಪಾರ್ಲೆಮೆಂಟರಿ ಅಸೋಸಿಯೇಷನ್ ಸಮಾವೇಶದಲ್ಲಿರುವ ಸ್ಪೀಕರ್ ಯು.ಟಿ ಖಾದರ್ ಕ್ಷೇತ್ರದ ರಸ್ತೆ ಸಂಪೂರ್ಣ ಹದಗೆಟ್ಟಿರುವ ವಿಚಾರ ಸಾಮಾಜಿಕ ಜಾಲತಾಣದ ಮುಖಾಂತರ ಮಾಹಿತಿ ಸಿಕ್ಕ ತಕ್ಷಣ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಇಂಜಿನಿಯರ್ ಗಳಿಗೆ ತಕ್ಷಣ ರಸ್ತೆ ದುರಸ್ತಿ ಸರಿಪಡಿಸಲು ಸೂಚನೆ ನೀಡಿದ್ದಾರೆ.
ಮಂಗಳೂರು ವಿಧಾನ‌ಸಭಾ ಕ್ಷೇತ್ರದ ತೊಕ್ಕೊಟ್ಟು-ಕುತ್ತಾರು-ಮುಡಿಪು,ಮಂಗಳೂರು ವಿಧಾನಸಭಾ ಕ್ಷೇತ್ರದ ಗಡಿ ಪ್ರದೇಶವಾದ ಮುದುಂಗಾರು ಕಟ್ಟೆ ತನಕ‌ ಸುಮಾರು 30 ಕೋಟಿ ಅನುದಾನ ಬಿಡುಗಡೆಯಾಗಿದ್ದು ಟೆಂಡರ್ ಕೂಡ ಮುಗಿದಿದೆ.
ಮಳೆಗಾಲದಲ್ಲಿ ಡಾಂಬಾರು ಘಟಕ ಸ್ಥಗಿತವಾದ ಕಾರಣ ಮಳೆಗಾಲ‌ ಮುಗಿದ ತಕ್ಷಣ ಕೆಲಸ ಪ್ರಾರಂಭಿಸಲಾಗುವುದು.
ಈಗಾಗಲೇ ತೊಕ್ಕೊಟ್ಟು ಕುತ್ತಾರು ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ಕೆಲಸ ಪ್ರಾರಂಭವಾಗಿದೆ, ಅಲ್ಲಿಯವರೆಗೆ ತಾತ್ಕಾಲಿಕ ದುರಸ್ಥಿ ಮಾಡಲು ತಕ್ಷಣ ಸೂಚಿಸಲಾಗಿದೆ.
ಜಿಲ್ಲೆಯ ಎಲ್ಲಾ ಕ್ಷೇತ್ರದ ಬಹುತೇಕ ರಸ್ತೆಗಳು ಮಳೆಗಾಲದಲ್ಲಿ ಹದಗೆಟ್ಟಿದ್ದರು ಮಂಗಳೂರು ವಿಧಾನ ಸಭಾ ಕ್ಷೇತ್ರದ ತೊಕ್ಕೊಟ್ಟು ಕುತ್ತಾರು ರಸ್ತೆಯ ಬಗ್ಗೆ ಕಾಳಜಿ ವಹಿಸಿ ಸಾಮಾಜಿಕ ಜಾಲತಾಣದಲ್ಲಿ‌ ಮಾಹಿತಿ ನೀಡಿದವರಿಗೆ ಕ್ಷೇತ್ರದ ಶಾಸಕರಾಗಿ ಸ್ಪೀಕರ್ ಯು.ಟಿ ಖಾದರ್ ಕೃತಜ್ಞತೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು