1:25 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸಾಮಾಜಿಕ ಜಾಲತಾಣದಿಂದ ಮಾಹಿತಿ:ಸಂಪೂರ್ಣ ಹದ ಗೆಟ್ಟ ರಸ್ತೆ ದುರಸ್ತಿಗೆ ಸಿಡ್ನಿಯಿಂದ ಪಿಡಬ್ಲ್ಯುಡಿ ಅಧಿಕಾರಿಗಳಿಗೆ ಸ್ಪೀಕರ್ ಖಾದರ್ ಕರೆ

09/11/2024, 16:24

ಮಂಗಳೂರು(reporterkarnataka.com):ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಕಾಮನ್ ವೆಲ್ತ್ ಪಾರ್ಲೆಮೆಂಟರಿ ಅಸೋಸಿಯೇಷನ್ ಸಮಾವೇಶದಲ್ಲಿರುವ ಸ್ಪೀಕರ್ ಯು.ಟಿ ಖಾದರ್ ಕ್ಷೇತ್ರದ ರಸ್ತೆ ಸಂಪೂರ್ಣ ಹದಗೆಟ್ಟಿರುವ ವಿಚಾರ ಸಾಮಾಜಿಕ ಜಾಲತಾಣದ ಮುಖಾಂತರ ಮಾಹಿತಿ ಸಿಕ್ಕ ತಕ್ಷಣ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಇಂಜಿನಿಯರ್ ಗಳಿಗೆ ತಕ್ಷಣ ರಸ್ತೆ ದುರಸ್ತಿ ಸರಿಪಡಿಸಲು ಸೂಚನೆ ನೀಡಿದ್ದಾರೆ.
ಮಂಗಳೂರು ವಿಧಾನ‌ಸಭಾ ಕ್ಷೇತ್ರದ ತೊಕ್ಕೊಟ್ಟು-ಕುತ್ತಾರು-ಮುಡಿಪು,ಮಂಗಳೂರು ವಿಧಾನಸಭಾ ಕ್ಷೇತ್ರದ ಗಡಿ ಪ್ರದೇಶವಾದ ಮುದುಂಗಾರು ಕಟ್ಟೆ ತನಕ‌ ಸುಮಾರು 30 ಕೋಟಿ ಅನುದಾನ ಬಿಡುಗಡೆಯಾಗಿದ್ದು ಟೆಂಡರ್ ಕೂಡ ಮುಗಿದಿದೆ.
ಮಳೆಗಾಲದಲ್ಲಿ ಡಾಂಬಾರು ಘಟಕ ಸ್ಥಗಿತವಾದ ಕಾರಣ ಮಳೆಗಾಲ‌ ಮುಗಿದ ತಕ್ಷಣ ಕೆಲಸ ಪ್ರಾರಂಭಿಸಲಾಗುವುದು.
ಈಗಾಗಲೇ ತೊಕ್ಕೊಟ್ಟು ಕುತ್ತಾರು ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ಕೆಲಸ ಪ್ರಾರಂಭವಾಗಿದೆ, ಅಲ್ಲಿಯವರೆಗೆ ತಾತ್ಕಾಲಿಕ ದುರಸ್ಥಿ ಮಾಡಲು ತಕ್ಷಣ ಸೂಚಿಸಲಾಗಿದೆ.
ಜಿಲ್ಲೆಯ ಎಲ್ಲಾ ಕ್ಷೇತ್ರದ ಬಹುತೇಕ ರಸ್ತೆಗಳು ಮಳೆಗಾಲದಲ್ಲಿ ಹದಗೆಟ್ಟಿದ್ದರು ಮಂಗಳೂರು ವಿಧಾನ ಸಭಾ ಕ್ಷೇತ್ರದ ತೊಕ್ಕೊಟ್ಟು ಕುತ್ತಾರು ರಸ್ತೆಯ ಬಗ್ಗೆ ಕಾಳಜಿ ವಹಿಸಿ ಸಾಮಾಜಿಕ ಜಾಲತಾಣದಲ್ಲಿ‌ ಮಾಹಿತಿ ನೀಡಿದವರಿಗೆ ಕ್ಷೇತ್ರದ ಶಾಸಕರಾಗಿ ಸ್ಪೀಕರ್ ಯು.ಟಿ ಖಾದರ್ ಕೃತಜ್ಞತೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು