12:05 AM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಸಾಮಾಜಿಕ ಜಾಲತಾಣದಿಂದ ಮಾಹಿತಿ:ಸಂಪೂರ್ಣ ಹದ ಗೆಟ್ಟ ರಸ್ತೆ ದುರಸ್ತಿಗೆ ಸಿಡ್ನಿಯಿಂದ ಪಿಡಬ್ಲ್ಯುಡಿ ಅಧಿಕಾರಿಗಳಿಗೆ ಸ್ಪೀಕರ್ ಖಾದರ್ ಕರೆ

09/11/2024, 16:24

ಮಂಗಳೂರು(reporterkarnataka.com):ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಕಾಮನ್ ವೆಲ್ತ್ ಪಾರ್ಲೆಮೆಂಟರಿ ಅಸೋಸಿಯೇಷನ್ ಸಮಾವೇಶದಲ್ಲಿರುವ ಸ್ಪೀಕರ್ ಯು.ಟಿ ಖಾದರ್ ಕ್ಷೇತ್ರದ ರಸ್ತೆ ಸಂಪೂರ್ಣ ಹದಗೆಟ್ಟಿರುವ ವಿಚಾರ ಸಾಮಾಜಿಕ ಜಾಲತಾಣದ ಮುಖಾಂತರ ಮಾಹಿತಿ ಸಿಕ್ಕ ತಕ್ಷಣ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಇಂಜಿನಿಯರ್ ಗಳಿಗೆ ತಕ್ಷಣ ರಸ್ತೆ ದುರಸ್ತಿ ಸರಿಪಡಿಸಲು ಸೂಚನೆ ನೀಡಿದ್ದಾರೆ.
ಮಂಗಳೂರು ವಿಧಾನ‌ಸಭಾ ಕ್ಷೇತ್ರದ ತೊಕ್ಕೊಟ್ಟು-ಕುತ್ತಾರು-ಮುಡಿಪು,ಮಂಗಳೂರು ವಿಧಾನಸಭಾ ಕ್ಷೇತ್ರದ ಗಡಿ ಪ್ರದೇಶವಾದ ಮುದುಂಗಾರು ಕಟ್ಟೆ ತನಕ‌ ಸುಮಾರು 30 ಕೋಟಿ ಅನುದಾನ ಬಿಡುಗಡೆಯಾಗಿದ್ದು ಟೆಂಡರ್ ಕೂಡ ಮುಗಿದಿದೆ.
ಮಳೆಗಾಲದಲ್ಲಿ ಡಾಂಬಾರು ಘಟಕ ಸ್ಥಗಿತವಾದ ಕಾರಣ ಮಳೆಗಾಲ‌ ಮುಗಿದ ತಕ್ಷಣ ಕೆಲಸ ಪ್ರಾರಂಭಿಸಲಾಗುವುದು.
ಈಗಾಗಲೇ ತೊಕ್ಕೊಟ್ಟು ಕುತ್ತಾರು ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ಕೆಲಸ ಪ್ರಾರಂಭವಾಗಿದೆ, ಅಲ್ಲಿಯವರೆಗೆ ತಾತ್ಕಾಲಿಕ ದುರಸ್ಥಿ ಮಾಡಲು ತಕ್ಷಣ ಸೂಚಿಸಲಾಗಿದೆ.
ಜಿಲ್ಲೆಯ ಎಲ್ಲಾ ಕ್ಷೇತ್ರದ ಬಹುತೇಕ ರಸ್ತೆಗಳು ಮಳೆಗಾಲದಲ್ಲಿ ಹದಗೆಟ್ಟಿದ್ದರು ಮಂಗಳೂರು ವಿಧಾನ ಸಭಾ ಕ್ಷೇತ್ರದ ತೊಕ್ಕೊಟ್ಟು ಕುತ್ತಾರು ರಸ್ತೆಯ ಬಗ್ಗೆ ಕಾಳಜಿ ವಹಿಸಿ ಸಾಮಾಜಿಕ ಜಾಲತಾಣದಲ್ಲಿ‌ ಮಾಹಿತಿ ನೀಡಿದವರಿಗೆ ಕ್ಷೇತ್ರದ ಶಾಸಕರಾಗಿ ಸ್ಪೀಕರ್ ಯು.ಟಿ ಖಾದರ್ ಕೃತಜ್ಞತೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು