1:47 PM Saturday15 - November 2025
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ…

ಇತ್ತೀಚಿನ ಸುದ್ದಿ

ಸಾಮಾಜಿಕ ಜಾಲತಾಣದಿಂದ ಮಾಹಿತಿ:ಸಂಪೂರ್ಣ ಹದ ಗೆಟ್ಟ ರಸ್ತೆ ದುರಸ್ತಿಗೆ ಸಿಡ್ನಿಯಿಂದ ಪಿಡಬ್ಲ್ಯುಡಿ ಅಧಿಕಾರಿಗಳಿಗೆ ಸ್ಪೀಕರ್ ಖಾದರ್ ಕರೆ

09/11/2024, 16:24

ಮಂಗಳೂರು(reporterkarnataka.com):ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಕಾಮನ್ ವೆಲ್ತ್ ಪಾರ್ಲೆಮೆಂಟರಿ ಅಸೋಸಿಯೇಷನ್ ಸಮಾವೇಶದಲ್ಲಿರುವ ಸ್ಪೀಕರ್ ಯು.ಟಿ ಖಾದರ್ ಕ್ಷೇತ್ರದ ರಸ್ತೆ ಸಂಪೂರ್ಣ ಹದಗೆಟ್ಟಿರುವ ವಿಚಾರ ಸಾಮಾಜಿಕ ಜಾಲತಾಣದ ಮುಖಾಂತರ ಮಾಹಿತಿ ಸಿಕ್ಕ ತಕ್ಷಣ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಇಂಜಿನಿಯರ್ ಗಳಿಗೆ ತಕ್ಷಣ ರಸ್ತೆ ದುರಸ್ತಿ ಸರಿಪಡಿಸಲು ಸೂಚನೆ ನೀಡಿದ್ದಾರೆ.
ಮಂಗಳೂರು ವಿಧಾನ‌ಸಭಾ ಕ್ಷೇತ್ರದ ತೊಕ್ಕೊಟ್ಟು-ಕುತ್ತಾರು-ಮುಡಿಪು,ಮಂಗಳೂರು ವಿಧಾನಸಭಾ ಕ್ಷೇತ್ರದ ಗಡಿ ಪ್ರದೇಶವಾದ ಮುದುಂಗಾರು ಕಟ್ಟೆ ತನಕ‌ ಸುಮಾರು 30 ಕೋಟಿ ಅನುದಾನ ಬಿಡುಗಡೆಯಾಗಿದ್ದು ಟೆಂಡರ್ ಕೂಡ ಮುಗಿದಿದೆ.
ಮಳೆಗಾಲದಲ್ಲಿ ಡಾಂಬಾರು ಘಟಕ ಸ್ಥಗಿತವಾದ ಕಾರಣ ಮಳೆಗಾಲ‌ ಮುಗಿದ ತಕ್ಷಣ ಕೆಲಸ ಪ್ರಾರಂಭಿಸಲಾಗುವುದು.
ಈಗಾಗಲೇ ತೊಕ್ಕೊಟ್ಟು ಕುತ್ತಾರು ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ಕೆಲಸ ಪ್ರಾರಂಭವಾಗಿದೆ, ಅಲ್ಲಿಯವರೆಗೆ ತಾತ್ಕಾಲಿಕ ದುರಸ್ಥಿ ಮಾಡಲು ತಕ್ಷಣ ಸೂಚಿಸಲಾಗಿದೆ.
ಜಿಲ್ಲೆಯ ಎಲ್ಲಾ ಕ್ಷೇತ್ರದ ಬಹುತೇಕ ರಸ್ತೆಗಳು ಮಳೆಗಾಲದಲ್ಲಿ ಹದಗೆಟ್ಟಿದ್ದರು ಮಂಗಳೂರು ವಿಧಾನ ಸಭಾ ಕ್ಷೇತ್ರದ ತೊಕ್ಕೊಟ್ಟು ಕುತ್ತಾರು ರಸ್ತೆಯ ಬಗ್ಗೆ ಕಾಳಜಿ ವಹಿಸಿ ಸಾಮಾಜಿಕ ಜಾಲತಾಣದಲ್ಲಿ‌ ಮಾಹಿತಿ ನೀಡಿದವರಿಗೆ ಕ್ಷೇತ್ರದ ಶಾಸಕರಾಗಿ ಸ್ಪೀಕರ್ ಯು.ಟಿ ಖಾದರ್ ಕೃತಜ್ಞತೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು