4:05 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಸಾಮಾಜಿಕ ಜಾಲತಾಣದಿಂದ ಮಾಹಿತಿ:ಸಂಪೂರ್ಣ ಹದ ಗೆಟ್ಟ ರಸ್ತೆ ದುರಸ್ತಿಗೆ ಸಿಡ್ನಿಯಿಂದ ಪಿಡಬ್ಲ್ಯುಡಿ ಅಧಿಕಾರಿಗಳಿಗೆ ಸ್ಪೀಕರ್ ಖಾದರ್ ಕರೆ

09/11/2024, 16:24

ಮಂಗಳೂರು(reporterkarnataka.com):ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಕಾಮನ್ ವೆಲ್ತ್ ಪಾರ್ಲೆಮೆಂಟರಿ ಅಸೋಸಿಯೇಷನ್ ಸಮಾವೇಶದಲ್ಲಿರುವ ಸ್ಪೀಕರ್ ಯು.ಟಿ ಖಾದರ್ ಕ್ಷೇತ್ರದ ರಸ್ತೆ ಸಂಪೂರ್ಣ ಹದಗೆಟ್ಟಿರುವ ವಿಚಾರ ಸಾಮಾಜಿಕ ಜಾಲತಾಣದ ಮುಖಾಂತರ ಮಾಹಿತಿ ಸಿಕ್ಕ ತಕ್ಷಣ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಇಂಜಿನಿಯರ್ ಗಳಿಗೆ ತಕ್ಷಣ ರಸ್ತೆ ದುರಸ್ತಿ ಸರಿಪಡಿಸಲು ಸೂಚನೆ ನೀಡಿದ್ದಾರೆ.
ಮಂಗಳೂರು ವಿಧಾನ‌ಸಭಾ ಕ್ಷೇತ್ರದ ತೊಕ್ಕೊಟ್ಟು-ಕುತ್ತಾರು-ಮುಡಿಪು,ಮಂಗಳೂರು ವಿಧಾನಸಭಾ ಕ್ಷೇತ್ರದ ಗಡಿ ಪ್ರದೇಶವಾದ ಮುದುಂಗಾರು ಕಟ್ಟೆ ತನಕ‌ ಸುಮಾರು 30 ಕೋಟಿ ಅನುದಾನ ಬಿಡುಗಡೆಯಾಗಿದ್ದು ಟೆಂಡರ್ ಕೂಡ ಮುಗಿದಿದೆ.
ಮಳೆಗಾಲದಲ್ಲಿ ಡಾಂಬಾರು ಘಟಕ ಸ್ಥಗಿತವಾದ ಕಾರಣ ಮಳೆಗಾಲ‌ ಮುಗಿದ ತಕ್ಷಣ ಕೆಲಸ ಪ್ರಾರಂಭಿಸಲಾಗುವುದು.
ಈಗಾಗಲೇ ತೊಕ್ಕೊಟ್ಟು ಕುತ್ತಾರು ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ಕೆಲಸ ಪ್ರಾರಂಭವಾಗಿದೆ, ಅಲ್ಲಿಯವರೆಗೆ ತಾತ್ಕಾಲಿಕ ದುರಸ್ಥಿ ಮಾಡಲು ತಕ್ಷಣ ಸೂಚಿಸಲಾಗಿದೆ.
ಜಿಲ್ಲೆಯ ಎಲ್ಲಾ ಕ್ಷೇತ್ರದ ಬಹುತೇಕ ರಸ್ತೆಗಳು ಮಳೆಗಾಲದಲ್ಲಿ ಹದಗೆಟ್ಟಿದ್ದರು ಮಂಗಳೂರು ವಿಧಾನ ಸಭಾ ಕ್ಷೇತ್ರದ ತೊಕ್ಕೊಟ್ಟು ಕುತ್ತಾರು ರಸ್ತೆಯ ಬಗ್ಗೆ ಕಾಳಜಿ ವಹಿಸಿ ಸಾಮಾಜಿಕ ಜಾಲತಾಣದಲ್ಲಿ‌ ಮಾಹಿತಿ ನೀಡಿದವರಿಗೆ ಕ್ಷೇತ್ರದ ಶಾಸಕರಾಗಿ ಸ್ಪೀಕರ್ ಯು.ಟಿ ಖಾದರ್ ಕೃತಜ್ಞತೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು