5:54 AM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಸಾಮಾಜಿಕ ಜಾಲತಾಣದಿಂದ ಮಾಹಿತಿ:ಸಂಪೂರ್ಣ ಹದ ಗೆಟ್ಟ ರಸ್ತೆ ದುರಸ್ತಿಗೆ ಸಿಡ್ನಿಯಿಂದ ಪಿಡಬ್ಲ್ಯುಡಿ ಅಧಿಕಾರಿಗಳಿಗೆ ಸ್ಪೀಕರ್ ಖಾದರ್ ಕರೆ

09/11/2024, 16:24

ಮಂಗಳೂರು(reporterkarnataka.com):ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಕಾಮನ್ ವೆಲ್ತ್ ಪಾರ್ಲೆಮೆಂಟರಿ ಅಸೋಸಿಯೇಷನ್ ಸಮಾವೇಶದಲ್ಲಿರುವ ಸ್ಪೀಕರ್ ಯು.ಟಿ ಖಾದರ್ ಕ್ಷೇತ್ರದ ರಸ್ತೆ ಸಂಪೂರ್ಣ ಹದಗೆಟ್ಟಿರುವ ವಿಚಾರ ಸಾಮಾಜಿಕ ಜಾಲತಾಣದ ಮುಖಾಂತರ ಮಾಹಿತಿ ಸಿಕ್ಕ ತಕ್ಷಣ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಇಂಜಿನಿಯರ್ ಗಳಿಗೆ ತಕ್ಷಣ ರಸ್ತೆ ದುರಸ್ತಿ ಸರಿಪಡಿಸಲು ಸೂಚನೆ ನೀಡಿದ್ದಾರೆ.
ಮಂಗಳೂರು ವಿಧಾನ‌ಸಭಾ ಕ್ಷೇತ್ರದ ತೊಕ್ಕೊಟ್ಟು-ಕುತ್ತಾರು-ಮುಡಿಪು,ಮಂಗಳೂರು ವಿಧಾನಸಭಾ ಕ್ಷೇತ್ರದ ಗಡಿ ಪ್ರದೇಶವಾದ ಮುದುಂಗಾರು ಕಟ್ಟೆ ತನಕ‌ ಸುಮಾರು 30 ಕೋಟಿ ಅನುದಾನ ಬಿಡುಗಡೆಯಾಗಿದ್ದು ಟೆಂಡರ್ ಕೂಡ ಮುಗಿದಿದೆ.
ಮಳೆಗಾಲದಲ್ಲಿ ಡಾಂಬಾರು ಘಟಕ ಸ್ಥಗಿತವಾದ ಕಾರಣ ಮಳೆಗಾಲ‌ ಮುಗಿದ ತಕ್ಷಣ ಕೆಲಸ ಪ್ರಾರಂಭಿಸಲಾಗುವುದು.
ಈಗಾಗಲೇ ತೊಕ್ಕೊಟ್ಟು ಕುತ್ತಾರು ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ಕೆಲಸ ಪ್ರಾರಂಭವಾಗಿದೆ, ಅಲ್ಲಿಯವರೆಗೆ ತಾತ್ಕಾಲಿಕ ದುರಸ್ಥಿ ಮಾಡಲು ತಕ್ಷಣ ಸೂಚಿಸಲಾಗಿದೆ.
ಜಿಲ್ಲೆಯ ಎಲ್ಲಾ ಕ್ಷೇತ್ರದ ಬಹುತೇಕ ರಸ್ತೆಗಳು ಮಳೆಗಾಲದಲ್ಲಿ ಹದಗೆಟ್ಟಿದ್ದರು ಮಂಗಳೂರು ವಿಧಾನ ಸಭಾ ಕ್ಷೇತ್ರದ ತೊಕ್ಕೊಟ್ಟು ಕುತ್ತಾರು ರಸ್ತೆಯ ಬಗ್ಗೆ ಕಾಳಜಿ ವಹಿಸಿ ಸಾಮಾಜಿಕ ಜಾಲತಾಣದಲ್ಲಿ‌ ಮಾಹಿತಿ ನೀಡಿದವರಿಗೆ ಕ್ಷೇತ್ರದ ಶಾಸಕರಾಗಿ ಸ್ಪೀಕರ್ ಯು.ಟಿ ಖಾದರ್ ಕೃತಜ್ಞತೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು