9:05 AM Sunday18 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಸಾಮಾಜಿಕ ಲೆಕ್ಕ ಪರಿಶೋಧನೆ ವರದಿಯಲ್ಲಿ ಸರಕಾರದ ನಿಯಮಗಳ ಉಲ್ಲಂಘನೆ: ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ಹುಣಸಗಿ ತಾಲೂಕು ಅಧ್ಯಕ್ಷರ ಮನವಿ

10/12/2024, 17:42

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯಿತಿಯ ಸಾಮಾಜಿಕ ಪರಿಶೋಧನೆ ವರದಿಯು ಸರ್ಕಾರದ ನಿಯಮಗಳನ್ನು ಪಾಲಿಸದೆ ಇರುವುದನ್ನು ಖಂಡಿಸಿ ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ಹುಣಸಗಿ ತಾಲೂಕು ಅಧ್ಯಕ್ಷರಾದ ಶಿವು ರಾಠೋಡ ಅವರಿಂದ ಯಾದಗಿರಿ ಜಿಲ್ಲೆ ಯೋಜನಾ ನಿರ್ದೇಶಕರಾದ ( DRDA) ಚೆನ್ನಬಸವರಾಜ ದೇವರಮನಿ ಅವರಿಗೆ ಲಮನವಿ ಪತ್ರ ಸಲ್ಲಿಸಲಾಯಿತು.
ನಾರಾಯಣಪುರ, ಬರದೇವನಾಳ, ಬೈಲಕುಂಟಿ, ಕಾಮನಟಗಿ ಹಾಗೂ ಬೈಚಬಾಳ ಈ ಎಲ್ಲಾ ಗ್ರಾಮ ಪಂಚಾಯಿತಿಯಲ್ಲಿ ಸರಕಾರ ಹೊರಡಿಸಿರುವ ನಿಯಮಗಳನ್ನು ಒಂದು ಪಾಲಿಸದೆ ತಮ್ಮ ಮನ – ಇಚ್ಛೆ ಬಂದಂತೆ ಗ್ರಾಮ ಪಂಚಾಯಿತಿಯ ಲೆಕ್ಕ ಪರಿಶೋಧನ ಗ್ರಾಮ ಸಭೆಗಳನ್ನು ಮಾಡಿರೋದು ಕಾನೂನು ಬಾಹಿರ ಚಟುವಟಿಕೆಯಾಗಿದೆ ಎಂದು ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ಶಿವು ರಾಠೋಡ ಆರೋಪಿಸಿದ್ದಾರೆ.
ಈ ಮೇಲ್ಕಂಡ ಗ್ರಾಮ ಪಂಚಾಯಿತಿಯ ಲೆಕ್ಕ ಪರಿಶೋಧನ ಗ್ರಾಮ ಸಭೆಯ ಸರಕಾರದ ನಿಯಮ ಅನುಸಾರ ಲೈವ್ ಯೂಟ್ಯೂಬ್ ವಿಡಿಯೋ ಹಾಗೂ ಜಿ.ಪಿ.ಎಸ್. ಫೋಟೋ ಸಮೇತ ಮಾಡುವುದು ಒಂದು ನಿಯಮವಾಗಿದೆ. ಆದರೆ ಇಲ್ಲಿರುವ ಅಧಿಕಾರಿಗಳಾದ ಪಿಡಿಓ ಹಾಗೆ ನೋಡಲ್ ಅಧಿಕಾರಿಗಳು ಅದರ ಜೊತೆಯಲ್ಲಿ ಹುಣಸಗಿ ತಾಲೂಕು ಲೆಕ್ಕ ಪರಿಶೋಧನಾ ವರದಿಯ ಅಧಿಕಾರಿಗಳಾದ ಸಿದ್ದನಗೌಡನವರು ಸರಕಾರದ ನಿಯಮಗಳನ್ನು ಉಲ್ಲಂಘಿಸಿರುವುದು ಖಂಡನೆ ಅಪರಾಧವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು