3:40 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಸಾಮಾಜಿಕ ಲೆಕ್ಕ ಪರಿಶೋಧನೆ ವರದಿಯಲ್ಲಿ ಸರಕಾರದ ನಿಯಮಗಳ ಉಲ್ಲಂಘನೆ: ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ಹುಣಸಗಿ ತಾಲೂಕು ಅಧ್ಯಕ್ಷರ ಮನವಿ

10/12/2024, 17:42

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯಿತಿಯ ಸಾಮಾಜಿಕ ಪರಿಶೋಧನೆ ವರದಿಯು ಸರ್ಕಾರದ ನಿಯಮಗಳನ್ನು ಪಾಲಿಸದೆ ಇರುವುದನ್ನು ಖಂಡಿಸಿ ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ಹುಣಸಗಿ ತಾಲೂಕು ಅಧ್ಯಕ್ಷರಾದ ಶಿವು ರಾಠೋಡ ಅವರಿಂದ ಯಾದಗಿರಿ ಜಿಲ್ಲೆ ಯೋಜನಾ ನಿರ್ದೇಶಕರಾದ ( DRDA) ಚೆನ್ನಬಸವರಾಜ ದೇವರಮನಿ ಅವರಿಗೆ ಲಮನವಿ ಪತ್ರ ಸಲ್ಲಿಸಲಾಯಿತು.
ನಾರಾಯಣಪುರ, ಬರದೇವನಾಳ, ಬೈಲಕುಂಟಿ, ಕಾಮನಟಗಿ ಹಾಗೂ ಬೈಚಬಾಳ ಈ ಎಲ್ಲಾ ಗ್ರಾಮ ಪಂಚಾಯಿತಿಯಲ್ಲಿ ಸರಕಾರ ಹೊರಡಿಸಿರುವ ನಿಯಮಗಳನ್ನು ಒಂದು ಪಾಲಿಸದೆ ತಮ್ಮ ಮನ – ಇಚ್ಛೆ ಬಂದಂತೆ ಗ್ರಾಮ ಪಂಚಾಯಿತಿಯ ಲೆಕ್ಕ ಪರಿಶೋಧನ ಗ್ರಾಮ ಸಭೆಗಳನ್ನು ಮಾಡಿರೋದು ಕಾನೂನು ಬಾಹಿರ ಚಟುವಟಿಕೆಯಾಗಿದೆ ಎಂದು ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ಶಿವು ರಾಠೋಡ ಆರೋಪಿಸಿದ್ದಾರೆ.
ಈ ಮೇಲ್ಕಂಡ ಗ್ರಾಮ ಪಂಚಾಯಿತಿಯ ಲೆಕ್ಕ ಪರಿಶೋಧನ ಗ್ರಾಮ ಸಭೆಯ ಸರಕಾರದ ನಿಯಮ ಅನುಸಾರ ಲೈವ್ ಯೂಟ್ಯೂಬ್ ವಿಡಿಯೋ ಹಾಗೂ ಜಿ.ಪಿ.ಎಸ್. ಫೋಟೋ ಸಮೇತ ಮಾಡುವುದು ಒಂದು ನಿಯಮವಾಗಿದೆ. ಆದರೆ ಇಲ್ಲಿರುವ ಅಧಿಕಾರಿಗಳಾದ ಪಿಡಿಓ ಹಾಗೆ ನೋಡಲ್ ಅಧಿಕಾರಿಗಳು ಅದರ ಜೊತೆಯಲ್ಲಿ ಹುಣಸಗಿ ತಾಲೂಕು ಲೆಕ್ಕ ಪರಿಶೋಧನಾ ವರದಿಯ ಅಧಿಕಾರಿಗಳಾದ ಸಿದ್ದನಗೌಡನವರು ಸರಕಾರದ ನಿಯಮಗಳನ್ನು ಉಲ್ಲಂಘಿಸಿರುವುದು ಖಂಡನೆ ಅಪರಾಧವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು