9:40 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಸಾಮಾಜಿಕ ಲೆಕ್ಕ ಪರಿಶೋಧನೆ ವರದಿಯಲ್ಲಿ ಸರಕಾರದ ನಿಯಮಗಳ ಉಲ್ಲಂಘನೆ: ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ಹುಣಸಗಿ ತಾಲೂಕು ಅಧ್ಯಕ್ಷರ ಮನವಿ

10/12/2024, 17:42

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯಿತಿಯ ಸಾಮಾಜಿಕ ಪರಿಶೋಧನೆ ವರದಿಯು ಸರ್ಕಾರದ ನಿಯಮಗಳನ್ನು ಪಾಲಿಸದೆ ಇರುವುದನ್ನು ಖಂಡಿಸಿ ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ಹುಣಸಗಿ ತಾಲೂಕು ಅಧ್ಯಕ್ಷರಾದ ಶಿವು ರಾಠೋಡ ಅವರಿಂದ ಯಾದಗಿರಿ ಜಿಲ್ಲೆ ಯೋಜನಾ ನಿರ್ದೇಶಕರಾದ ( DRDA) ಚೆನ್ನಬಸವರಾಜ ದೇವರಮನಿ ಅವರಿಗೆ ಲಮನವಿ ಪತ್ರ ಸಲ್ಲಿಸಲಾಯಿತು.
ನಾರಾಯಣಪುರ, ಬರದೇವನಾಳ, ಬೈಲಕುಂಟಿ, ಕಾಮನಟಗಿ ಹಾಗೂ ಬೈಚಬಾಳ ಈ ಎಲ್ಲಾ ಗ್ರಾಮ ಪಂಚಾಯಿತಿಯಲ್ಲಿ ಸರಕಾರ ಹೊರಡಿಸಿರುವ ನಿಯಮಗಳನ್ನು ಒಂದು ಪಾಲಿಸದೆ ತಮ್ಮ ಮನ – ಇಚ್ಛೆ ಬಂದಂತೆ ಗ್ರಾಮ ಪಂಚಾಯಿತಿಯ ಲೆಕ್ಕ ಪರಿಶೋಧನ ಗ್ರಾಮ ಸಭೆಗಳನ್ನು ಮಾಡಿರೋದು ಕಾನೂನು ಬಾಹಿರ ಚಟುವಟಿಕೆಯಾಗಿದೆ ಎಂದು ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ಶಿವು ರಾಠೋಡ ಆರೋಪಿಸಿದ್ದಾರೆ.
ಈ ಮೇಲ್ಕಂಡ ಗ್ರಾಮ ಪಂಚಾಯಿತಿಯ ಲೆಕ್ಕ ಪರಿಶೋಧನ ಗ್ರಾಮ ಸಭೆಯ ಸರಕಾರದ ನಿಯಮ ಅನುಸಾರ ಲೈವ್ ಯೂಟ್ಯೂಬ್ ವಿಡಿಯೋ ಹಾಗೂ ಜಿ.ಪಿ.ಎಸ್. ಫೋಟೋ ಸಮೇತ ಮಾಡುವುದು ಒಂದು ನಿಯಮವಾಗಿದೆ. ಆದರೆ ಇಲ್ಲಿರುವ ಅಧಿಕಾರಿಗಳಾದ ಪಿಡಿಓ ಹಾಗೆ ನೋಡಲ್ ಅಧಿಕಾರಿಗಳು ಅದರ ಜೊತೆಯಲ್ಲಿ ಹುಣಸಗಿ ತಾಲೂಕು ಲೆಕ್ಕ ಪರಿಶೋಧನಾ ವರದಿಯ ಅಧಿಕಾರಿಗಳಾದ ಸಿದ್ದನಗೌಡನವರು ಸರಕಾರದ ನಿಯಮಗಳನ್ನು ಉಲ್ಲಂಘಿಸಿರುವುದು ಖಂಡನೆ ಅಪರಾಧವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು