2:02 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಸಾಮರಸ್ಯ ಹಾಳು ಮಾಡುವ ಯಾವುದೇ ಮತೀಯ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಿ; ಯು.ಟಿ. ಖಾದರ್‌ 

07/05/2022, 16:57

ಮಂಗಳೂರು(reporterkarnataka.com): ಸಮಾಜದಲ್ಲಿ ಗೊಂದಲ ಹಾಗೂ ವೈಮನಸ್ಸು ಹುಟ್ಟಿಸುವ ಸಂದೇಶವನ್ನು ಹಾಕುವ ಕಿಡಿಗೇಡಿಗಳ ವಿರುದ್ಧ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸಾಮರಸ್ಯ ಹಾಳು ಮಾಡುವ ಯಾವುದೇ ಮತೀಯ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್‌ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಒಂದು ಕಾಲವಿತ್ತು ಸಾಮಾಜಿಕ ಜಾಲತಾಣದಲ್ಲಿ ಇಂತಹ ಸಂದೇಶ ಬಂದಾಗ ಅದರ ಹಿಂದೆ ಬಿದ್ದು,ಅವರ ವಿರುದ್ಧ ಕ್ರಮ ಕೈಗೊಂಡಾಗ ಬೇರೆಯವರು ಇಂತಹ ಕೃತ್ಯದಲ್ಲಿ ತೊಡಗಿಕೊಳ್ಳುವುದಕ್ಕೆ ಹೆದರುತ್ತಿದ್ದರು. ಆದರೆ ಇದೀಗ ಇಂತಹ ಕೃತ್ಯಗಳು ಮತ್ತೆ ಮತ್ತೆ ಮರುಕಳುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಕೆಲದಿನಗಳ ಹಿಂದೆ ಮುಸ್ಲಿಂ ಡಿಫೆನ್ಸ್‌ ಫೋರ್ಸ್‌ (ಎಂಡಿಎಫ್‌) ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳು ಹರಿದಾಡುತ್ತಿವೆ.

ಸಮಾಜದಲ್ಲಿ ಯಾರು ಹೇಗೆ ಇರಬೇಕು-ಇರಬಾರದು ಎಂಬುವುದನ್ನು ಹೇಳಿಕೊಡಲು ತಂದೆ-ತಾಯಿ, ಕುಟುಂಬಸ್ಥರು ಹಾಗೂ ಧಾರ್ಮಿಕ ಮುಖಂಡರಿದ್ದಾರೆ. ಅದು ಬಿಟ್ಟು ಎಲ್ಲಿಯೋ ಕುಳಿತು ಎಚ್ಚರಿಕೆ ಕೊಡುವಂತರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.ಇದಕ್ಕೆ ಸರ್ಕಾರ ಕಡಿವಾಣ ಹಾಕಬೇಕು. ಇಂತಹ ಕೃತ್ಯ ನಡೆಸುವ ಮತೀಯ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದರು.

ಮಾಜಿ ಸಚಿವ ಅಭಯಚಂದ್ರ ಜೈನ್‌, ವಿಧಾನಪರಿಷತ್‌ ಶಾಸಕ ಹರೀಶ್‌ ಕುಮಾರ್‌ ಸೇರಿ ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು