7:59 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಸಮರ್ಪಕವಾಗಿ ಮಾಸಾಶನ ನೀಡಿ: ಕೂಡ್ಲಿಗಿಯಲ್ಲಿ ಸರಕಾರಕ್ಕೆ ವಿಮುಕ್ತ ದೇವದಾಸಿಯರ ಹಕ್ಕೊತ್ತಾಯ

24/02/2022, 12:11

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ವಿಮುಕ್ತ ದೇವದಾಸಿ ಮಹಿಳೆಯರು,ತಮಗೆ ಸಮರ್ಪಕವಾಗಿ ಮಾಸಾಶನ ಮಂಜೂರು ಮಾಡುವಂತೆ ‍ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಸರ್ಕಾರಕ್ಕೆ  ಆಗ್ರಹಿಸಿದ್ದಾರೆ.‍

ಅವರು ಎಐಟಿಯುಸಿ ನೇತೃತ್ವದಲ್ಲಿ ಕಾರ್ಮಿಕ ಮುಖಂಡ ಹೆಚ್.ವೀರಣ್ಣನವರ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸಿದರು. ನಂತರ ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ತಮ್ಮ ಹಕ್ಕೊತ್ತಾಯ ಪತ್ರ ನೀಡಿದರು. ಉಪತಹಶಿಲ್ದಾರರಾದ ಅರುಂಧತಿ ನಾಗವಿರವರಿಗೆ ಮುಖಂಡರಾದ ಗಜಾಪುರ ರೇಣುಕಮ್ಮ ನೇತೃತ್ವದಲ್ಲಿ,ತಾಲೂಕಿನ   ವಿಮುಕ್ತ ದೇವದಾಸಿ ಮಹಿಳೆಯರು ಹಕ್ಕೊತ್ತಾಯ ಪತ್ರ ನೀಡಿದರು. ಪಟ್ಟಣ ಸೇರಿದಂತೆ ತಾಲೂಕಿನ ಹಲವೆಡೆಗಳಿಂದ ಬಂದಿದ್ದ,ವಿಮುಕ್ತ ದೇವದಾಸಿ ಮಹಿಳೆಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು