11:13 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಸಮಸ್ಯೆಗಳ ಪರಿಹಾರಕ್ಕೆ ಹುಡುಕುವ ಅನ್ವೇಷಣಾ ಶಾಸ್ತ್ರವೇ ಸಂಶೋಧನೆ: ಡಾ. ಜಯವಂತ ನಾಯಕ್

27/08/2022, 20:37

ಮಂಗಳೂರು(reporterkarnataka.com): ನಗರದ ಕೆನರಾ ಕಾಲೇಜಿನ ವಾಣಿಜ್ಯ ಸ್ನಾತಕೋತ್ತರ ವಿಭಾಗದಿಂದ ಆಯೋಜಿಸಿದ “ರಾಜ್ಯ ಮಟ್ಟದ ವಿಚಾರ ಮಂಡಣೆ” ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಯಾಗಿ  ಮಂಗಳೂರು ವಿ.ವಿ. ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕ  ಡಾ. ಜಯವಂತ ನಾಯಕ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಂಶೋಧನಾ ಪ್ರವೃತ್ತಿಯು ಸಣ್ಣ ವಯಸ್ಸಿನಿಂದಲೇ ಬರಬೇಕು ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಖಜಾಂಜಿ, ಸಿ.ಎ. ವಾಮನ್ ಕಾಮತ್ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜು ಜೀವನದಲ್ಲಿ ಕೇವಲ ಪಠ್ಯ ಪುಸ್ತಕಕ್ಕೆ ಮಾತ್ರ ತಮ್ಮನ್ನು ಸೀಮಿತಗೊಳಿಸದೆ ಸಂಶೋಧನೆಯ ಮೂಲಕ ಸಮಾಜದಲ್ಲಿರುವ ತೊಂದರೆಗಳಿಗೆ ಸೂಕ್ತ ಪರಿಹಾರವನ್ನು ಕಂಡು ಹುಡುಕಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲೆ ಡಾ.ಪ್ರೇಮಲತಾ ವಿ., ವಾಣಿಜ್ಯ ವಿಭಾಗದ ಮುಖ್ಯಸ್ಥೆ ದೇಜಮ್ಮ ಎ.,ವಾಣಿಜ್ಯ ಸ್ನಾತಕೋತ್ತರ ವಿಭಾಗ ಸಂಚಾಲಕಿ ಸ್ವಾತಿ ನಾಯಕ್, ಕಾರ್ಯಕ್ರಮದ ಸಂಯೋಜಕರಾದ ಡಾ. ಪ್ರಶಾಂತ್ ಭಟ್, ಮೇಘ, ಉಪಸ್ಥಿತರಿದ್ದರು.

ನಗರದ ವಿವಿಧ ಕಾಲೇಜುಗಳಿಂದ 25ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಸಂಶೋಧನಾ ಪ್ರಬಂಧವನ್ನು ಮಂಡಿಸಿದರು. ಮಮತಾ ಕಾರ್ಯಕ್ರಮವನ್ನು ನಿರೂಪಿಸಿದರು. ಅನ್ವಿಕಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು