1:35 AM Monday16 - September 2024
ಬ್ರೇಕಿಂಗ್ ನ್ಯೂಸ್
ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್… ವೈದ್ಯರ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ನಗರ ಠಾಣೆ ಎದುರು ಆರೋಗ್ಯ ಸಿಬ್ಬಂದಿಗಳ… ರಸ್ತೆ ಆಳುವ ಬೀದಿ ನಾಯಿಗಳು: ಶ್ರೀನಿವಾಸಪುರದಲ್ಲಿ ಶ್ವಾನಗಳದ್ದೇ ಕಾಟ; ಕಣ್ಮುಚ್ಚಿ ಕುಳಿತ ಪುರಸಭೆ…

ಇತ್ತೀಚಿನ ಸುದ್ದಿ

ಸಮಸ್ಯೆಗಳ ಪರಿಹಾರಕ್ಕೆ ಹುಡುಕುವ ಅನ್ವೇಷಣಾ ಶಾಸ್ತ್ರವೇ ಸಂಶೋಧನೆ: ಡಾ. ಜಯವಂತ ನಾಯಕ್

27/08/2022, 20:37

ಮಂಗಳೂರು(reporterkarnataka.com): ನಗರದ ಕೆನರಾ ಕಾಲೇಜಿನ ವಾಣಿಜ್ಯ ಸ್ನಾತಕೋತ್ತರ ವಿಭಾಗದಿಂದ ಆಯೋಜಿಸಿದ “ರಾಜ್ಯ ಮಟ್ಟದ ವಿಚಾರ ಮಂಡಣೆ” ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಯಾಗಿ  ಮಂಗಳೂರು ವಿ.ವಿ. ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕ  ಡಾ. ಜಯವಂತ ನಾಯಕ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಂಶೋಧನಾ ಪ್ರವೃತ್ತಿಯು ಸಣ್ಣ ವಯಸ್ಸಿನಿಂದಲೇ ಬರಬೇಕು ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಖಜಾಂಜಿ, ಸಿ.ಎ. ವಾಮನ್ ಕಾಮತ್ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜು ಜೀವನದಲ್ಲಿ ಕೇವಲ ಪಠ್ಯ ಪುಸ್ತಕಕ್ಕೆ ಮಾತ್ರ ತಮ್ಮನ್ನು ಸೀಮಿತಗೊಳಿಸದೆ ಸಂಶೋಧನೆಯ ಮೂಲಕ ಸಮಾಜದಲ್ಲಿರುವ ತೊಂದರೆಗಳಿಗೆ ಸೂಕ್ತ ಪರಿಹಾರವನ್ನು ಕಂಡು ಹುಡುಕಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲೆ ಡಾ.ಪ್ರೇಮಲತಾ ವಿ., ವಾಣಿಜ್ಯ ವಿಭಾಗದ ಮುಖ್ಯಸ್ಥೆ ದೇಜಮ್ಮ ಎ.,ವಾಣಿಜ್ಯ ಸ್ನಾತಕೋತ್ತರ ವಿಭಾಗ ಸಂಚಾಲಕಿ ಸ್ವಾತಿ ನಾಯಕ್, ಕಾರ್ಯಕ್ರಮದ ಸಂಯೋಜಕರಾದ ಡಾ. ಪ್ರಶಾಂತ್ ಭಟ್, ಮೇಘ, ಉಪಸ್ಥಿತರಿದ್ದರು.

ನಗರದ ವಿವಿಧ ಕಾಲೇಜುಗಳಿಂದ 25ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಸಂಶೋಧನಾ ಪ್ರಬಂಧವನ್ನು ಮಂಡಿಸಿದರು. ಮಮತಾ ಕಾರ್ಯಕ್ರಮವನ್ನು ನಿರೂಪಿಸಿದರು. ಅನ್ವಿಕಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು