5:32 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಸಂಬಳ ಕೇಳಿದಕ್ಕೆ ಯುವಕನ ಮರಕ್ಕೆ ಕಟ್ಟಿಹಾಕಿ ಅಮಾನುಷ ಹಲ್ಲೆ, ಚಿತ್ರಹಿಂಸೆ: ವೀಡಿಯೊ ವೈರಲ್; 5 ಮಂದಿ ಆರೋಪಿಗಳ ಬಂಧನ

08/02/2024, 21:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸೋಮ್ಲಾಪುರ ರಸ್ತೆಯ ಪ್ಲಾಂಟೇಶನ್ ನಲ್ಲಿ ಯುವಕನ ಕಟ್ಟಿ ಹಾಕಿ ಅಮಾನುಷವಾಗಿ ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಿದ ಪ್ರಕರಣ ಸಂಬಂಧಿಸಿದಂತೆ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಾಫಿನಾಡಲ್ಲಿ ಹೋಟೆಲ್ ಕೆಲಸದ ಸಂಬಳ ಕೇಳಿದ್ದಕ್ಕೆ ಕೊಪ್ಪ ಸಮೀಪದ ಕರ್ಕೇಶ್ವರ ಗ್ರಾಮದ ಸತೀಶ್ ಎಂಬವರನ್ನು
ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಲಾಗಿತ್ತು. ಮರಕ್ಕೆ ಯುವಕನ ಕೈ ಕಾಲು ಕಟ್ಟಿ ಹಾಕಿ 5 ಜನರು ಹಲ್ಲೆ ನಡೆಸಿದ್ದರು. ಹಗ್ಗದಿಂದ ಕೈ ಕಾಲು ಕಟ್ಟಿ ಯುವಕನಿಗೆ ಚಿತ್ರಹಿಂಸೆ ನೀಡಲಾಗಿತ್ತು.
ಯುವಕನ ಮೇಲೆ ಹಲ್ಲೆ ನಡೆಸಿ ವಿಡಿಯೋ ರೆಕಾರ್ಡ್ ಕೂಡ ಮಾಡಲಾಗಿತ್ತು. ಮದ್ಯಪಾನ ಮಾಡುತ್ತ ಯುವಕರ ತಂಡ ಹಲ್ಲೆ ನಡೆಸಿತ್ತು. ಈ ವೀಡಿಯೊ ವೈರಲ್ ಆಗಿತ್ತು. ಆರೋಪಿಗಳ ಬಂಧನಕ್ಕೆ 5 ತಂಡಗಳನ್ನು ರಚಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಗಳಾದ ಮಹೇಶ್, ವಿಠಲ್, ಸಿರಿಲ್, ಸುನೀಲ್ ಹಾಗೂ ಮಂಜು ಎಂಬವರನ್ನು ಬಂಧಿಸಲಾಗಿದೆ.


ಗಂಭೀರ ಗಾಯಗೊಂಡ ಸತೀಶ್ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು