8:39 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಸಂಬಳದ ಹೆಂಡ್ತಿಯಾಗಲು ಪ್ರಶಸ್ತಿ ವಿಜೇತ ನಟಿಗೆ ಉದ್ಯಮಿ ಆಫರ್: ಆತ ಫಿಕ್ಸ್ ಮಾಡಿದ ತಿಂಗಳ ಸ್ಯಾಲರಿ ಎಷ್ಟು ಗೊತ್ತೆ?

15/07/2022, 08:22

ಮುಂಬೈ(reporterkarnataka.com):
ಉದ್ಯಮಿಯೊಬ್ಬರು ತಮ್ಮ ಸಂಬಳದ ಹೆಂಡತಿಯಾಗಲು ಖ್ಯಾತ ನಟಿಯೊಬ್ಬಳಿಗೆ ಆಫರ್ ನೀಡಿದ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಸಂದರ್ಶನವೊಂದರಲ್ಲಿ ನಟಿ ನೀತು ಚಂದ್ರ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ತಿಂಗಳಿಗೆ 25 ಲಕ್ಷ ನೀಡುವುದಾಗಿ ಆಫರ್ ಮಾಡಿದ್ದರು ಎಂದು  ನೀತು ಚಂದ್ರ ಹೇಳಿದ್ದಾರೆ.

ನಟಿ ನೀತು ಚಂದ್ರ, ’13 ರಾಷ್ಟ್ರೀಯ ಪ್ರಶಸ್ತಿ ವಿಜೇತರ’ ಜೊತೆ ಕೆಲಸ ಮಾಡಿದರೂ, ಈಗ ನನ್ನತ್ರ ಹಣವೂ ಇಲ್ಲ, ಕೆಲಸವೂ ಇಲ್ಲ ಎಂದು ಹೇಳಿದ್ದಾರೆ. ಪ್ರಸಿದ್ಧ ಕಾಸ್ಟಿಂಗ್ ನಿರ್ದೇಶಕರೊಬ್ಬರು ಆಡಿಷನ್ ಮಾಡಿ ನನ್ನನ್ನು ಚಿತ್ರಕ್ಕೆ ಆಯ್ಕೆ ಮಾಡಿದ ಒಂದು ಗಂಟೆಯೊಳಗೆ ತಿರಸ್ಕರಿಸಿದರು ಎಂದು ನೆನಪಿಸಿಕೊಂಡ ನೀತು. ತನ್ನ ಇಂದಿನ ಪರಿಸ್ಥಿತಿಯ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ನಟಿ ನೀತು ಚಂದ್ರ ಅವರು ಗರಂ ಮಸಾಲಾ (2005) ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿ, ಗಗನಸಖಿಯ ಪಾತ್ರವನ್ನು ನಿರ್ವಹಿಸಿದ್ದರು. ಅಲ್ಲಿಂದೀಚೆಗೆ ಅವರು ಟ್ರಾಫಿಕ್ ಸಿಗ್ನಲ್, ಒನ್ ಟೂ ತ್ರೀ, ಓಯ್ ಲಕ್ಕಿ ಲಕ್ಕಿ ಓಯೆ, ಅಪಾರ್ಟ್‌ಮೆಂಟ್, 13 ಬಿ ಮುಂತಾದ ಹಲವಾರು ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಶೆಫಾಲಿ ಶಾ, ರಾಹುಲ್ ಬೋಸ್ ಮತ್ತು ಸುಮೀತ್ ರಾಘವನ್ ಜೊತೆಗಿನ ಕುಚ್ ಲವ್ ಜೈಸಾ ನಟಿ ನೀತು ಚಂದ್ರ ಅವರ ಕೊನೆಯ ಹಿಂದಿ ಚಿತ್ರವಾಗಿದೆ.

ಇನ್ನು, ಓಯೆ ಲಕ್ಕಿ ಲಕ್ಕಿ ಓಯೆ ಅತ್ಯುತ್ತಮ ಜನಪ್ರಿಯ ಚಲನಚಿತ್ರಕ್ಕಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದು, ನೀತೂ ಅಭಿನಯದ ಮಿಥಿಲಾ ಮಖಾನ್ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಕೂಡ ಲಭಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು