8:58 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಸಂಭ್ರಮ- ಸಡಗರಕ್ಕೆ ಸಾಕ್ಷಿಯಾದ ಕಡಲನಗರಿಯ ಮಂಗಳಾ ಕ್ರೀಡಾಂಗಣ: 4500 ಕ್ರೀಡಾಪಟುಗಳ ಪಾದಸ್ಪರ್ಶ

17/01/2025, 22:36

ಮಂಗಳೂರು(reporterkarnataka.com): ನಗರದ ಮಂಗಳಾ ಕ್ರೀಡಾಂಗಣ ಇಂದು ಸಂಭ್ರಮ- ಸಡಗರಕ್ಕೆ ಸಾಕ್ಷಿಯಾಯಿತು. ಸುಮಾರು 4500 ಕ್ರೀಡಾಪಟುಗಳ ಸಂಗಮದ ತಾಣವಾಯಿತು. ಇದಕ್ಕೆ ಕಾರಣ ಕರ್ನಾಟಕ ಕ್ರೀಡಾಕೂಟ 2025.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು. ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ಜಿಲ್ಲಾಡಳಿತ ಕ್ರೀಡಾಕೂಟವನ್ನು ಆಯೋಜಿಸಿತ್ತು. ಸಿಎಂ ಜತೆಗೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಕೆ.ಗೋವಿಂದರಾಜು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ‌ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಐವನ್ ಡಿಸೋಜಾ, ಮಾಜಿ ಸಚಿವ ರಮಾನಾಥ ರೈ ಸೇರಿ ಜಿಲ್ಲೆಯ ಶಾಸಕರುಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಮಾತನಾಡಿ, ಕ್ರೀಡಾಪಟುಗಳು, ಕೋಚ್ ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ. ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತನ್ನಿ ಎಂದು ಕರೆ ನೀಡಿದರು.‌
ಅಗತ್ಯ ವೇದಿಕೆ ಮತ್ತು ಉತ್ತಮ ಪ್ರೋತ್ಸಾಹ ಇಲ್ಲದಿದ್ದರೆ ಕ್ರೀಡಾ ಕ್ಷೇತ್ರ ಮತ್ತು ಕ್ರೀಡಾಪಟುಗಳು ಬೆಳವಣಿಗೆ ಆಗಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ಸರ್ಕಾರ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಹಾಜರಾತಿ ಸೇರಿ ಇನ್ನಿತರೆ ರಿಯಾಯ್ತಿಗಳನ್ನು ಕೊಡುವ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.


ಒಲಂಪಿಕ್ ನಲ್ಲಿ ಮೆಡಲ್ ತಂದವರಿಗೆ 6 ಕೋಟಿ ರೂಪಾಯಿ ಕೊಡ್ತೀವಿ. ಹಾಗೆಯೇ ಏಷ್ಯಾ ಕ್ರೀಡಾಕೂಟ ಮತ್ತು ರಾಷ್ಟ್ರಮಟ್ಟದಲ್ಲಿ ಪದಕ ತಂದವರಿಗೂ ನಗದು ಬಹುಮಾನ ಕೊಡುತ್ತಿದ್ದೇವೆ. ಈ ಪ್ರೋತ್ಸಾಹ ಸದುಪಯೋಗಪಡಿಸಿಕೊಂಡು ಮೆಡಲ್ ಗಳನ್ನು ತಂದು ಕ್ರೀಡಾಕ್ಷೇತ್ರವನ್ನು ಬೆಳಗಿಸಿ, ಬೆಳೆಸಿ ಎಂದು ಕರೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು