2:53 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಸಂಹಿತಾ ಸಾಧನೆಗೆ ಶಿಕ್ಷಣ ಸಚಿವರ ಅಭಿನಂದನೆ; ದೂರವಾಣಿ ಕರೆ ಮಾಡಿದ ಮಿನಿಸ್ಟ್ರು ಬಿ.ಸಿ. ನಾಗೇಶ್

16/08/2022, 19:26

ಮಂಗಳೂರು(reporterkarnataka.com): ವಿಶ್ವ ಟೇಕ್ವಾಂಡೋ ಚಾಪಿಯನ್‌ ಶಿಪ್‌ ನಲ್ಲಿ ಮಹಿಳೆಯರ (ಕಿರಿಯ) ವಿಭಾಗದಲ್ಲಿ ಬೆಳ್ಳಿ ಗೆದ್ದ ಶಾರದಾ  ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ.ಸಂಹಿತಾ ಅಲೆವೂರಾಯ ಅವರನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ದೂರವಾಣಿ ಮೂಲಕ ಕರೆ ಮಾಡಿ ಅಭಿನಂದಿಸಿದ್ದಾರೆ.

ಸಂಹಿತಾ ಹೆತ್ತವರಾದ ಕದ್ರಿಯ ವಾಸುದೇವ ಭಟ್‌ ಕುಂಜತ್ತೋಡಿ ಅವರಿಗೆ ಕರೆ ಮಾಡಿದ ಶಿಕ್ಷಣ ಸಚಿವರು, ವಿದ್ಯಾರ್ಥಿನಿಯ ಸಾಧನೆಗೆ ಅಭಿನಂದನೆ ಸಲ್ಲಿಸಿದರು. ಕ್ರೀಡೆಯ ಕುರಿತು ಮಕ್ಕಳಿಗೆ ನೀಡುತ್ತಿರುವ ಪ್ರೋತ್ಸಾಹಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ಸಂಹಿತಾ ಅವರ ಸಾಧನೆ ಕುರಿತು ಮೂಖ್ಯಮಂತ್ರಿ ಅವರಿಗೆ ತಿಳಿಸುತ್ತೇನೆ ಎಂದರು.

ಬಳಿಕ ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್‌ ಕರೆ ಮಾಡಿ ಸಂಹಿತಾ ಸಾಧನೆಗೆ ಅಭಿನಂದಿಸಿದ್ದು, ನಮ್ಮೂರ ಹುಡುಗಿಯ ಕ್ರೀಡೆಯ ಸಾಧನೆ ಎಲ್ಲರಿಗೆ ಪ್ರೇರಣೆ ಎಂದರು.  

“ನಾನು ಕರೆಯನ್ನು ನಿರೀಕ್ಷಿಸಿರಲಿಲ್ಲ. ನಾನ್ರಿ ಏಜುಕೇಶನ್‌ ಮಿನಿಸ್ಟ್ರು ಬಿ.ಸಿ. ನಾಗೇಶ್‌ ಮಾತನಾಡೋದು ಎಂದಾಗ ಖಚಿತ ಆಯಿತು. ನನ್ನ ನಂಬರ್‌ ಸಂಗ್ರಹಿಸಿ ಕರೆ ಮಾಡುವಂತಹ ಸ್ಪಂದನೆ ಇರುವ ಸಚಿವರಿಗೆ ಮತ್ತು ಜನಸ್ಪಂದನ ಸರಕಾರಕ್ಕೆ ಕೃತಜ್ಞ” ಎಂದು ವಾಸುದೇವ ಭಟ್‌ ಕುಂಜತ್ತೋಡಿ ಹೇಳಿದ್ದಾರೆ.

ವಾಸುದೇವ ಭಟ್‌ ಅವರ ಪತ್ನಿ ದೀಪಾ ಕೆ.ಎಸ್.‌ ಮತ್ತು ಋತ್ವಿಕ್‌ ಅಲೆವೂರಾಯ ಅವರು ಪವರ್‌ಲಿಫ್ಟಿಂಗ್‌ ವಿಭಾಗದಲ್ಲಿ ಅಂತಾರಾಷ್ಟ್ರೀಯ ಕೂಟಗಳಲ್ಲಿ, ಚಿನ್ನ ಮತ್ತು ಬೆಳ್ಳಿಯ ಪದಕಗಳನ್ನು ಗಳಿಸಿದ್ದಾರೆ. ಒಂದೇ ಮನೆಯ ಮೂರು ಮಂದಿಯೂ ಕ್ರೀಡೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ ಮಾಡಿರುವುದು ಗಮನೀಯ.

ಇತ್ತೀಚಿನ ಸುದ್ದಿ

ಜಾಹೀರಾತು