7:27 PM Friday18 - July 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು

ಇತ್ತೀಚಿನ ಸುದ್ದಿ

ಸಂಹಿತಾ ಸಾಧನೆಗೆ ಶಿಕ್ಷಣ ಸಚಿವರ ಅಭಿನಂದನೆ; ದೂರವಾಣಿ ಕರೆ ಮಾಡಿದ ಮಿನಿಸ್ಟ್ರು ಬಿ.ಸಿ. ನಾಗೇಶ್

16/08/2022, 19:26

ಮಂಗಳೂರು(reporterkarnataka.com): ವಿಶ್ವ ಟೇಕ್ವಾಂಡೋ ಚಾಪಿಯನ್‌ ಶಿಪ್‌ ನಲ್ಲಿ ಮಹಿಳೆಯರ (ಕಿರಿಯ) ವಿಭಾಗದಲ್ಲಿ ಬೆಳ್ಳಿ ಗೆದ್ದ ಶಾರದಾ  ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ.ಸಂಹಿತಾ ಅಲೆವೂರಾಯ ಅವರನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ದೂರವಾಣಿ ಮೂಲಕ ಕರೆ ಮಾಡಿ ಅಭಿನಂದಿಸಿದ್ದಾರೆ.

ಸಂಹಿತಾ ಹೆತ್ತವರಾದ ಕದ್ರಿಯ ವಾಸುದೇವ ಭಟ್‌ ಕುಂಜತ್ತೋಡಿ ಅವರಿಗೆ ಕರೆ ಮಾಡಿದ ಶಿಕ್ಷಣ ಸಚಿವರು, ವಿದ್ಯಾರ್ಥಿನಿಯ ಸಾಧನೆಗೆ ಅಭಿನಂದನೆ ಸಲ್ಲಿಸಿದರು. ಕ್ರೀಡೆಯ ಕುರಿತು ಮಕ್ಕಳಿಗೆ ನೀಡುತ್ತಿರುವ ಪ್ರೋತ್ಸಾಹಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ಸಂಹಿತಾ ಅವರ ಸಾಧನೆ ಕುರಿತು ಮೂಖ್ಯಮಂತ್ರಿ ಅವರಿಗೆ ತಿಳಿಸುತ್ತೇನೆ ಎಂದರು.

ಬಳಿಕ ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್‌ ಕರೆ ಮಾಡಿ ಸಂಹಿತಾ ಸಾಧನೆಗೆ ಅಭಿನಂದಿಸಿದ್ದು, ನಮ್ಮೂರ ಹುಡುಗಿಯ ಕ್ರೀಡೆಯ ಸಾಧನೆ ಎಲ್ಲರಿಗೆ ಪ್ರೇರಣೆ ಎಂದರು.  

“ನಾನು ಕರೆಯನ್ನು ನಿರೀಕ್ಷಿಸಿರಲಿಲ್ಲ. ನಾನ್ರಿ ಏಜುಕೇಶನ್‌ ಮಿನಿಸ್ಟ್ರು ಬಿ.ಸಿ. ನಾಗೇಶ್‌ ಮಾತನಾಡೋದು ಎಂದಾಗ ಖಚಿತ ಆಯಿತು. ನನ್ನ ನಂಬರ್‌ ಸಂಗ್ರಹಿಸಿ ಕರೆ ಮಾಡುವಂತಹ ಸ್ಪಂದನೆ ಇರುವ ಸಚಿವರಿಗೆ ಮತ್ತು ಜನಸ್ಪಂದನ ಸರಕಾರಕ್ಕೆ ಕೃತಜ್ಞ” ಎಂದು ವಾಸುದೇವ ಭಟ್‌ ಕುಂಜತ್ತೋಡಿ ಹೇಳಿದ್ದಾರೆ.

ವಾಸುದೇವ ಭಟ್‌ ಅವರ ಪತ್ನಿ ದೀಪಾ ಕೆ.ಎಸ್.‌ ಮತ್ತು ಋತ್ವಿಕ್‌ ಅಲೆವೂರಾಯ ಅವರು ಪವರ್‌ಲಿಫ್ಟಿಂಗ್‌ ವಿಭಾಗದಲ್ಲಿ ಅಂತಾರಾಷ್ಟ್ರೀಯ ಕೂಟಗಳಲ್ಲಿ, ಚಿನ್ನ ಮತ್ತು ಬೆಳ್ಳಿಯ ಪದಕಗಳನ್ನು ಗಳಿಸಿದ್ದಾರೆ. ಒಂದೇ ಮನೆಯ ಮೂರು ಮಂದಿಯೂ ಕ್ರೀಡೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ ಮಾಡಿರುವುದು ಗಮನೀಯ.

ಇತ್ತೀಚಿನ ಸುದ್ದಿ

ಜಾಹೀರಾತು