10:17 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸಮ್ಮೇದ ಶಿಖರ್ಜಿ ಪ್ರವಾಸಿ ತಾಣ: ಜೈನರ ಆಕ್ಷೇಪ; ಮೂಡುಬಿದರೆಯಲ್ಲಿ ಬೃಹತ್ ಜಾಥಾ

28/12/2022, 20:59

ಮೂಡುಬಿದಿರೆ(reporterkarnataka.com): ಜೈನ ಧರ್ಮೀಯರ ಪವಿತ್ರ ಕ್ಷೇತ್ರ ಜಾರ್ಖಂಡ್‌ನ ಶ್ರೀ ಸಮ್ಮೇದ ಶಿಖರ್ಜಿ ಪ್ರದೇಶವನ್ನು ಅಲ್ಲಿನ ಸರ್ಕಾರ ಪ್ರವಾಸಿ ತಾಣವನ್ನಾಗಿ ಮಾಡಲು ಹೊರಡಿಸಿದ ಆದೇಶದ ವಿರುದ್ಧ ದ.ಕ. ಮತ್ತು ಉಡುಪಿ ಜಿಲ್ಲೆಯ ಜೈನ ಸಮಾಜದವರಿಂದ ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆ ಜಾಥಾ ನಡೆಯಿತು..

ಜೈನ ಮಠದ ಭಟ್ಟಾರಕ ಸ್ವಾಮೀಜಿಯವರ ನೇತೃತ್ವದಲ್ಲಿ ಸಾವಿರ ಕಂಬ ಬಸದಿ ಆವರಣದಿಂದ ಮುಖ್ಯ ರಸ್ತೆಯ ಮೂಲಕ ಆಡಳಿತ ಸೌಧದವರೆಗೆ ದ.ಕ, ಉಡುಪಿ ಜಿಲ್ಲೆಯ ಸಾವಿರಾರು ಜೈನ ಸಮಾಜದವರು ಮೌನ ಪ್ರತಿಭಟನೆ ನಡೆಸಿದರು.

ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿ, ಸಮ್ಮೇದ ಶಿಖರ್ಜಿ ಜೈನರ ಪವಿತ್ರ ಕ್ಷೇತ್ರವಾಗಿದ್ದು 24 ತೀರ್ಥಂಕರರ ಪೈಕಿ ತೀರ್ಥಂಕರರು ಇಲ್ಲಿ ತಪಸ್ಸು ಮಾಡಿ ಸಿದ್ಧಿ ಪ್ರಾಪ್ತಿ ಹೊಂದಿದ ಪುಣ್ಯ ಭೂಮಿ. ನಿತ್ಯ ಸಾವಿರಾರು ಜೈನರು ಶ್ರದ್ಧಾ ಭಕ್ತಿಯಿಂದ ಕ್ಷೇತ್ರದ ದರ್ಶನ ಮಾಡಿ ಪುನೀತರಾಗುತ್ತಿದ್ದಾರೆ. ಇಂತಹ ಪವಿತ್ರ ಕ್ಷೇತ್ರವನ್ನು ಜಾರ್ಖಂಡ ಸರ್ಕಾರ ಪ್ರವಾಸಿ ತಾಣವಾಗಿಸಲು ತೀರ್ಮಾನ ಕೈಗೊಂಡಿರುವುದು ಅಲ್ಪ ಸಂಖ್ಯಾತ ಜೈನರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದಂತಾಗಿದೆ‌ ಎಂದು ವಿರೋಧ ವ್ಯಕ್ತಪಡಿಸಿದರು. ದಬ್ಬಾಳಿಕೆಯನ್ನು ನಿಲ್ಲಿಸಿ ಪುಣ್ಯ ಭೂಮಿಯ ಪಾವಿತ್ರ್ಯತೆಯನ್ನು ರಕ್ಷಿಸಬೇಕು. ಆದೇಶವನ್ನು ತಕ್ಷಣ ಹಿಂಪಡೆಯುವಂತೆ ಜಾರ್ಖಂಡ ಮುಖ್ಯಮಂತ್ರಿ, ರಾಷ್ಟ್ರಪತಿ, ಪ್ರಧಾಮಮಂತ್ರಿಯವರನ್ನು ಈ ಮೂಲಕ ಒತ್ತಾಯಿಸುತ್ತೇವೆ ಎಂದರು..

ನಂತರ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.ಅಳದಂಗಡಿ ಅರಮನೆಯ ಪದ್ಮಪ್ರಸಾದ್ ಅಜಿಲ, ಚೌಟರ ಅರಮನೆಯ ಕುಲದೀಪ್ ಎಂ., ಮಾಜಿ ಸಚಿವ ಅಭಯಚಂದ್ರ ಜೈನ್, ಜೈನ್ ಮಿಲನ್ ವಲಯ ಅಧ್ಯಕ್ಷ ಪುಷ್ಪರಾಜ್ ಜೈನ್, ಬಸದಿಗಳ ಮೊಕ್ತೇಸರರಾದ ಪಟ್ಣಶೆಟ್ಟಿ ಸುಧೇಶ್ ಕುಮಾರ್, ಆನಡ್ಕ ದಿನೇಶ್ ಕುಮಾರ್, ಆದರ್ಶ್, ಜೈನ ಸಮಾಜದ ಪ್ರಮುಖರಾದ ಕೆ.ಪಿ ಜಗದೀಶ್ ಅಧಿಕಾರಿ, ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಅಭಿಜಿತ್ ಎಂ, , ಡಾ.ಮಹಾವೀರ ಜೈನ್, ನಮಿರಾಜ್, ಧನಕೀರ್ತಿ ಬಲಿಪ, ರಾಜವರ್ಮ ಬೈಲಂಗಡಿ, ಸುಭಾಶ್ಚಂದ್ರ ಚೌಟ, ಯತಿರಾಜ್ ಜೈನ್ ಮತ್ತಿತರರು ಈ ಸಂದರ್ಭದಲ್ಲಿದ್ದರು.

ಕೃಷ್ಣರಾಜ ಹೆಗ್ಡೆ ಸ್ವಾಗತಿಸಿ ಮುನಿರಾಜ ರೆಂಜಾಳ ನಿರೂಪಿಸಿದರು. ಶೈಲೇಂದ್ರ ಕುಮಾರ್ ಪ್ರಾಸ್ತಾವಿ ಮಾತುಗಳನ್ನಾಡಿದರು. ಪದ್ಮಪ್ರಸಾದ್ ಜೈನ್ ಮನವಿ ಪತ್ರ ವಾಚಿಸಿದರು. ಪ್ರವೀಣ್‌ಚಂದ್ರ ಜೈನ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು