5:11 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಸಂಪರ್ಕ್ ಸೇ ಸಮರ್ಥನ್ ಅಭಿಯಾನ: ಕೇಂದ್ರ ಸರಕಾರದ ಸಾಧನೆಯ ಕಿರುಹೊತ್ತಿಗೆ ಹಂಚಿಕೆ

21/07/2023, 21:19

ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಯಶಸ್ವಿಯಾಗಿ 9 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಸಂಪರ್ಕ್ ಸೇ ಸಮರ್ಥನ್ ಅಭಿಯಾನದ ಅಂಗವಾಗ ಶಾಸಕ ವೇದವ್ಯಾಸ ಕಾಮತ್ ಹಾಗೂ ಮಂಡಲ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಪ್ರಮುಖರು ಎಸ್.ಎಲ್. ಶೇಟ್ ಜ್ಯುವೆಲ್ಲರ್ಸ್ & ಡೈಮಂಡ್ಸ್ ಮಾಲಕರಾದ ಪ್ರಶಾಂತ್ ಶೇಟ್ ಅವರ ಮನೆಗೆ ಭೇಟಿ ನೀಡಿ ಕೇಂದ್ರ ಸರಕಾರದ ಸಾಧನೆಗಳ ಕಿರು ಹೊತ್ತಿಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಭಾರತ ಇಂದು ಜಾಗತಿಕವಾಗಿ ಸಾಕಷ್ಟು ಬದಲಾವಣೆಗಳನ್ನು ಕಂಡಿದೆ. ಕಾಂಗ್ರೇಸ್ ಆಡಳಿತದ ಸಂದರ್ಭಕ್ಕೂ ಈಗಿನ ಭಾರತಕ್ಕೂ ಸಾಕಷ್ಟು ಬದಲಾವಣೆಗಳಾಗಿವೆ. ದಿನದ 20 ಗಂಟೆಯೂ ದೇಶಕ್ಕಾಗಿ ಶ್ರಮಿಸುವ ನರೇಂದ್ರ ಮೋದಿ ಅವರನ್ನು ಗೆಲ್ಲಿಸಲು ಸಹಕಾರ ನೀಡಬೇಕು ಎಂದರು.
ದೇಶದ ಸುರಕ್ಷತೆಗಾಗಿ ಕೇಂದ್ರ ಸರಕಾರ ಮಹತ್ವಪೂರ್ಣ ಹೆಜ್ಜೆಯಿರಿಸಿದೆ ನೀಡಿದೆ. ಆರ್ಟಿಕಲ್ 370 ರದ್ದುಪಡಿಸುವ ಮೂಲಕ ಕಾಶ್ಮೀರವನ್ನು ಈ ದೇಶದಲ್ಲಿ ಉಳಿಸಿಕೊಳ್ಳುವ ಗಟ್ಟಿತನ ತೋರಿಸಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಸಂಧ್ಯಾ ಮೋಹನ್ ಆಚಾರ್ಯ, ಬಿಜೆಪಿ ಮುಖಂಡರಾದ ನಿತಿನ್ ಕುಮಾರ್, ರೂಪಾ ಡಿ ಬಂಗೇರ, ರಮೇಶ್ ಹೆಗ್ಡೆ, ಗುರುಚರಣ್, ಗೋಕುಲ್ ದಾಸ್ ಭಟ್, ಮೋಹನ್ ಆಚಾರ್ಯ, ರಾಮ್ ಪೈ, ನಿಲೇಶ್ ಕಾಮತ್, ಪವನ್ ಶೆಣೈ, ಪೃಥ್ವಿರಾಜ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು