7:57 AM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಸಂಪುಟ ಪುನಾರಚನೆಗೆ ಯಾವುದೇ ಪಟ್ಟಿ ಸಿದ್ಧವಾಗಿಲ್ಲ, ನಾನು ಯಾವುದೇ ಹೆಸರುಗಳನ್ನು ಅಮಿತ್ ಷಾಗೆ ಕೊಟ್ಟಿಲ್ಲ: ಸಿಎಂ 

11/05/2022, 17:41

ಹೊಸದಿಲ್ಲಿ(reporterkarnataka.com): ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಜತೆ ಚರ್ಚೆ ಮಾಡುವುದಾಗಿ ಗೃಹ ಸಚಿವ ಅಮಿತ್ ಷಾ ತಿಳಿಸಿದ್ದಾರೆ. ಸಂಪುಟ ಪುನಾರಚನೆಗೆ ಯಾವುದೇ ಪಟ್ಟಿ ಸಿದ್ಧವಾಗಿಲ್ಲ. ನಾನು ಯಾವುದೇ ಹೆಸರುಗಳನ್ನು ಅಮಿತ್ ಷಾ ಅವರಿಗೆ ಕೊಟ್ಟಿಲ್ಲ.ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹೊಸದಿಲ್ಲಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ರಾಜ್ಯ ರಾಜಕೀಯದ ಸ್ಥಿತಿಗತಿ ಆಧರಿಸಿ ಬದಲಾವಣೆ ಆಗಬಹುದು ಎಂದಷ್ಟೇ ಹೇಳಿದರು.

ಸಂಪುಟ ವಿಸ್ತರಣೆಯೋ, ಪುನರಚನೆಯೋ ಎನ್ನುವ ಬಗ್ಗೆ ಚರ್ಚೆಯಾಗಿದೆ. ನಿನ್ನೆಯ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆಯೂ ಚರ್ಚೆಯಾಗಿದೆ. 2-3
ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಇತ್ತೀಚೆಗೆ ರಾಜ್ಯಕ್ಕೆ ಆಗಮಿಸಿದ್ದ ಅಮಿತ್ ಷಾ ಅವರು ಸಚಿವ ಸಂಪುಟ ವಿಸ್ತರಣೆ ಮತ್ತು ಪುನರ್ ರಚನೆ ಸಂಬಂಧ ದೆಹಲಿಯಲ್ಲಿ ಚರ್ಚೆ ಮಾಡೋಣ ಎಂದಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರ ಸಿಎಂ ಬೊಮ್ಮಾಯಿ ದೆಹಲಿಗೆ ತೆರಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು