3:12 AM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಸಂಸದ ಸ್ಥಾನದಿಂದ ಪ್ರಜ್ವಲ್​ ರೇವಣ್ಣ ಅನರ್ಹ: ತಾತ ದೇವೇಗೌಡರ ಜೊತೆ ಚರ್ಚಿಸಿ ಸುಪ್ರೀಂಕೋರ್ಟ್​ ಗೆ ಅರ್ಜಿ

02/09/2023, 19:57

ಹಾಸನ(reporterkarnataka.com): ಚುನಾವಣಾ ಅಕ್ರಮ ಆರೋಪದ ಮೇಲೆ ಸಂಸದ ಸ್ಥಾನದಿಂದ ಅನರ್ಹಗೊಂಡ ಜೆಡಿಎಸ್ ನ ಪ್ರಜ್ವಲ್‌ ರೇವಣ್ಣ ಅವರು ತಾತ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ತಂದೆ, ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರೊಂದಿಗೆ ಚರ್ಚಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಹೈಕೋರ್ಟ್ ಪ್ರಜ್ವಲ್ ಅವರನ್ನು ಸಂಸತ್ ಸ್ಥಾನದಿಂದ ಅನರ್ಹ ಗೊಳಿಸಿ, ಅವರು 6 ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಆದೇಶ ನೀಡಿತ್ತು.
ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲು ಪ್ರಜ್ವಲ್‌ ರೇವಣ್ಣ ತಯಾರಿ ನಡೆಸಿದ್ದಾರೆ.
ಸೋಮವಾರವೇ ಸುಪ್ರೀಂಕೋರ್ಟ್​ ಗೆ ಅರ್ಜಿ ಸಲ್ಲಿಸಲು ಪ್ರಜ್ವಲ್‌ ರೇವಣ್ಣ ಮುಂದಾಗಿದ್ದಾರೆ. ತಾತ ಮಾಜಿ ಪ್ರಧಾನಿ ದೇವೇಗೌಡರು, ತಂದೆ ಮಾಜಿ ಸಚಿವ ರೇವಣ್ಣ ಜೊತೆ ಈ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಇಂದು ಹೊಳೆನರಸೀಪುರದ ದೇವೇಶ್ವರ ಹಾಗೂ ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ನಡೆಯಲಿರುವ ಶ್ರಾವಣ ಮಾಸದ ಪೂಜೆಯಲ್ಲಿ ಭಾಗಿಯಾಗಲು ಮಾಜಿ ಪ್ರಧಾನಿ ದೇವೇಗೌಡರು ಅವರು ನಿನ್ನೆಯೇ ಹುಟ್ಟೂರಿಗೆ ಆಗಮಿಸಿದ್ದಾರೆ. ಸದ್ಯ ಇಂದು ಪೂಜೆ ಬಳಿಕ ಕೋರ್ಟ್ ತೀರ್ಪಿನ ಬಗ್ಗೆ ಪ್ರಜ್ವಲ್ ಹಾಗೂ ಕುಟುಂಬಸ್ಥರು ಚರ್ಚೆ ನಡೆಸಲಿದ್ದಾರೆ. ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿ ತೀರ್ಪಿಗೆ ತಡೆಯಾಜ್ಞೆ ತರುವ ಬಗ್ಗೆ ಚರ್ಚಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು